ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲೇಬೇಕೆಂದು ಪ್ರತಿಪಕ್ಷಗಳು ಶಪಥ ಮಾಡಿದ್ದು, ಇದಕ್ಕಾಗಿಯೇ ಬೆಂಗಳೂರಿನಲ್ಲಿ ಇಂದು ರಾಷ್ಟ್ರಮಟ್ಟದ ವಿಪಕ್ಷಗಳೆಲ್ಲ ಸೇರಿ ಸಭೆ ನಡೆಸಲಿದ್ದು, ಸಭೆಯಲ್ಲಿ ಪಾಲ್ಗೊಳ್ಳಲು ರಾಷ್ಟ್ರದ ಮೂಲೆ ಮೂಲೆಗಳಿಂದ ಘಟಾನುಘಟಿ ನಾಯಕರು ಬೆಂಗಳೂರಿಗೆ ಬಂದಿಳಿದಿದ್ದಾರೆ. ಆದ್ರೆ, ಹೊರರಾಜ್ಯಗಳಿಂದ ಆಗಮಿಸಿರುವ ರಾಜಕಾರಣಿಗಳ ಸೇವೆ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಪ್ರಶ್ನಿಸಿದ್ದಾರೆ.
“ಇದು ರಾಜ್ಯ ಸರ್ಕಾರದ ಕಾರ್ಯಕ್ರಮವೂ ಅಲ್ಲ, ಹೊಸ ಸರ್ಕಾರದ ಪ್ರಮಾಣವಚನವೂ ಅಲ್ಲ. ಇದು ಕೇವಲ ರಾಜಕೀಯ ಸಭೆ. ಜವಾಬ್ದಾರಿಯುತ ಅಧಿಕಾರಿಗಳನ್ನು ಮೈತ್ರಿ ರಾಜಕೀಯ ನಾಯಕರಿಗೆ ಆತಿಥ್ಯ ವಹಿಸಲು ನಿಯೋಜಿಸುವುದು 6.5 ಕೋಟಿ ಕನ್ನಡಿಗರಿಗೆ ಮಾಡಿದ ಘೋರ ಅನ್ಯಾಯ ಮತ್ತು ರಾಜ್ಯಕ್ಕೆ ಮಾಡಿದ ದೊಡ್ಡ ಅವಮಾನ” ಎಂದು ಅವರು ಹೇಳಿದರು.
ಅವರು ಕೇವಲ ಅಧಿಕಾರಿಗಳಲ್ಲ, ಐಎಎಸ್ ಅಧಿಕಾರಿಗಳು ರಾಜ್ಯದ ಸಾಮರ್ಥ್ಯ ಮತ್ತು ದಕ್ಷತೆಯ ಸಂಕೇತಗಳು. ಅವರು ರಾಜ್ಯದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ರಾಜಕಾರಣಿಗಳಿಗೆ ಸೇವೆ ಸಲ್ಲಿಸಲು ಈ ಅಧಿಕಾರಿಗಳನ್ನು ದ್ವಾರಪಾಲಕರಾಗಿ ನಿಯೋಜಿಸುವುದು ಆಡಳಿತ ಪಕ್ಷದ ಅಹಂಕಾರದ ಉತ್ತುಂಗವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು.
ಇದು ಅಖಿಲ ಭಾರತ ಸೇವೆಯ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಇದು ಅವರ ಆತ್ಮಗೌರವ ಮತ್ತು ಗೌರವಕ್ಕೆ ಧಕ್ಕೆ ತರುತ್ತದೆ ಎಂದು ತಿಳಿದ ಅಧಿಕಾರಿಗಳು ಈ ಕೆಲಸವನ್ನು ಮಾಡಲು ಒಪ್ಪಿಕೊಂಡಿದ್ದರಿಂದ ನನಗೆ ಆಶ್ಚರ್ಯ ಮತ್ತು ಆಘಾತವಾಯಿತು. ಇಂತಹ ವಿವಾದಾತ್ಮಕ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿ ಜನರಿಗೆ ಉತ್ತರದಾಯಿಯಾಗಿದ್ದಾರೆ” ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ
ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ @INCKarnataka ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ?1/6@IASassociation pic.twitter.com/R1zsE0JCzn
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 18, 2023