ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ನಾಳೆ ಅವರಿಗೆ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ. ನಾಳೆ ನಡೆಯಲಿರುವ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಲೆಂದು ಅವರ ಅಭಿಮಾನಿಗಳು ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.
ಬಸವನಗುಡಿಯ ದೊಡ್ಡಗಣಪತಿ ದೇವಸ್ಥಾನದಲ್ಲಿ ಹೃದಯ ಶಸ್ತ್ರ ಚಿಕಿತ್ಸೆಗಾಗಿ ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಾಗಿರುವ ಹೆಚ್.ಡಿ. ಕುಮಾರಸ್ವಾಮಿ ಬೇಗನೇ ಗುಣಮುಖರಾಗಲಿ ಎಂದು ಪೂಜೆ ಸಲ್ಲಿಸಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಗ್ಯಕ್ಕಾಗಿ ವಿಧಾನಪರಿಷತ್ ಸದಸ್ಯ ಟಿಎ ಶರವಣ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬಸವನಗುಡಿಯ ದೊಡ್ಡಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾತಾಡಿದ ಎಂಎಲ್ಸಿ ಶರವಣ ಅವರು, ಕುಮಾರಸ್ವಾಮಿಯವರಿಗೆ ನಾಳೆ ಹೃದಯ ಶಸ್ತ್ರಚಿಕಿತ್ಸೆ ನಡೆಯುತ್ತಿದೆ. ತಾಯಿ ಹೃದಯದ ಹೆಚ್.ಡಿ ಕುಮಾರಸ್ವಾಮಿಯವರ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಲಿ. ಮೂರನೇ ಬಾರಿಗೆ ನಡೆಯುತ್ತಿರುವ ಶಸ್ತ್ರಚಿಕಿತ್ಸೆ ಯಶಸ್ವಿಯಾಗಲಿ. ಅವರಿಗೆ ಉತ್ತಮ ಆರೋಗ್ಯಕ್ಕಾಗಿ ವಿಘ್ನೇಶ್ವರನಿಗೆ ಪೂಜೆ ಸಲ್ಲಿಸಿದ್ದೇವೆ. 108 ತೆಂಗಿನಕಾಯಿ ಹೊಡೆದು ಪೂಜೆ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.