ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನವಾದ ಸೂರಜ್ ರೇವಣ್ಣ ಕುರಿತು ತಂದೆ ಹೆಚ್ ಡಿ ರೇವಣ್ಣ ಪ್ರತಿಕ್ರಿಯಿಸಿದ್ದಾರೆ. ರಾಜ್ಯ ಸರ್ಕಾರ ಸೂರಜ್ ರೇವಣ್ಣ ಪ್ರಕರಣವನ್ನು ಸಿಐಡಿಗೆ ವಹಿಸಿದ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ಹೆಚ್ ಡಿ ರೇವಣ್ಣ, ಮಾಡ್ಲಿ ಬಿಡಿ ಯಾರು ಬೇಡ ಅಂದೊರು, ನನಗೆ ನ್ಯಾಯಾಂಗದ ಬಗ್ಗೆ ನಂಬಿಕೆ ಇದೆ ಎಂದು ಹೇಳಿದ್ದಾರೆ.
ಕಾರಂಜಿ ಆಂಜನೇಯ ದೇವಸ್ಥಾನದ ಬಳಿ ಮಾತನಾಡಿದ ಹೆಚ್ ಡಿ ರೇವಣ್ಣ, ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ಗೊತ್ತಿದೆ. ನನಗೆ ದೇವರ ಮೇಲೆ, ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಈ ಷಡ್ಯಂತ್ರಕ್ಕೆಲ್ಲ ನಾನು ಹೆದರಿ ಹೋಗಲ್ಲ. ಯಾರು ಷಡ್ಯಂತ್ರ ಮಾಡ್ತಿದ್ದಾರೆ ಎಂದು ಈಗ ಹೇಳೊಲ್ಲ, ಇದನ್ನೆಲ್ಲ ಎದುರಿಸುತ್ತೇವೆ. ಕಾಲ ಬಂದಾಗ ಎಲ್ಲ ಹೇಳ್ತೀನಿ. ಆ ಸಮಯ ಬರಲಿ ಎಂದಿದ್ದಾರೆ.
Ad