News Karnataka Kannada
Tuesday, May 07 2024
ಬೆಂಗಳೂರು

ಬಿಜೆಪಿ ಪರವಾಗಿರುವಂತೆ ಪಕ್ಷದವರಿಗೆ ದೇವೇಗೌಡರ ಪಾಠ

ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ-ಜೆಡಿಎಸ್‌ ಮೈತ್ರಿಯಾಗಿದ್ದು, ಕಮಲ ಪಡೆಯ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುವಂತೆ ಮಾಜಿ ಪ್ರಧಾನಿ ದೇವೇಗೌಡರು ತಮ್ಮ ಪಕ್ಷದವರಿಗೆ ಕರೆ ನೀಡಿದ್ದಾರೆ.
Photo Credit : News Kannada

ಬೆಂಗಳೂರು: ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ-ಜೆಡಿಎಸ್‌ ಮೈತ್ರಿಯಾಗಿದ್ದು, ಕಮಲ ಪಡೆಯ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುವಂತೆ ಮಾಜಿ ಪ್ರಧಾನಿ ದೇವೇಗೌಡರು ತಮ್ಮ ಪಕ್ಷದವರಿಗೆ ಕರೆ ನೀಡಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಮಾತನಾಡುತ್ತ, ಕೋಲಾರ, ಮಂಡ್ಯ, ಹಾಸನ ಕ್ಷೇತ್ರಗಳನ್ನು ನಮಗೆ ಕೊಡಲಾಗಿದೆ. ಉಳಿದ 25 ಕ್ಷೇತ್ರದಲ್ಲಿ ನೀವು ಬಿಜೆಪಿ ಚಿಹ್ನೆಗೆ ಮತ ಹಾಕಬೇಕು ಎಂದು ಮನವಿ ಮಾಡಿದ್ದಾರೆ.

ಕುಮಾರಸ್ವಾಮಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದು, 3 ಜೆಡಿಎಸ್ ಕ್ಷೇತ್ರಕ್ಕೂ ಹೋರಾಟ ಮಾಡುತ್ತಾರೆ. ಇಂದು ನಮ್ಮ ಅಳಿಯ ಡಾ. ಮಂಜುನಾಥ್ ಒಪ್ಪಿಗೆಯೊಂದಿಗೆ ಕೇಂದ್ರದ ನಾಯಕರ ಒತ್ತಾಯದಂತೆ ಅವರನ್ನು ಬಿಜೆಪಿಯಿಂದ ನಿಲ್ಲಿಸಲಾಗಿದೆ ಎಂದು ದೇವೇಗೌಡರು ಹೇಳಿದರು.

ತಮ್ಮ ಅಳಿಯನ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಅವರು, ಡಾ.ಮಂಜುನಾಥ್ ರಾಜಕೀಯಕ್ಕೆ ಬರುವ ವ್ಯಕ್ತಿ ಅಲ್ಲ. ಇಡೀ ಭಾರತದಲ್ಲಿ 2 ಸಾವಿರ ಹೃದಯದ ರೋಗದ ಚಿಕಿತ್ಸೆ ಮಾಡುವ ಆಸ್ಪತ್ರೆ ಮಾಡಿರುವ ಬಗ್ಗೆ ನನಗೆ ಹೆಮ್ಮೆಯಿದೆ ಎಂದರು.

ಇದರೊಂದಿಗೆ ಮೈಸೂರಿನಿಂದ ಕಣಕ್ಕಿಳಿದಿರುವ ರಾಜರಿಗೆ ಹಾಗು ತುಮಕೂರಿನ ಸೋಮಣ್ಣ ಸೇರಿದಂತೆ ಎಲ್ಲರಿಗೂ ಬೆಂಬಲ ಕೊಡಬೇಕು ಎಂದು ವಿನಂತಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು