News Karnataka Kannada
Thursday, May 02 2024
ಬೆಂಗಳೂರು

ಚಿನ್ನಾಭರಣವಿದ್ದ ಬ್ಯಾಗ್​ ಹಿಂತಿರುಗಿಸಿ ಕರ್ತವ್ಯ ನಿಷ್ಠೆ ಮೆರೆದ ಹೆಡ್​ಕಾನ್ಸ್ ಟೇಬಲ್

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ದಂಪತಿಗೆ ಕರೆ ಮಾಡಿ ಹಿಂತಿರುಗಿಸುವ ಮೂಲಕ ಹೆಡ್​ಕಾನ್ಸ್ ಟೇಬಲ್  ಹೆಚ್​.ಸಿ ಮಲ್ಲಿಕಾರ್ಜುನ​ ಕರ್ತವ್ಯ ನಿಷ್ಠೆ ಮೆರೆದಿದ್ದು,  ಈ ಘಟನೆ ನಗರದ ಕೋರಮಂಗಲದ ವಾಟರ್ ಟ್ಯಾಂಕ್ ಸಿಗ್ನಲ್ ಬಳಿ ನಡೆದಿದೆ. 
Photo Credit : News Kannada

ಬೆಂಗಳೂರು:  ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ದಂಪತಿಗೆ ಕರೆ ಮಾಡಿ ಹಿಂತಿರುಗಿಸುವ ಮೂಲಕ ಹೆಡ್​ಕಾನ್ಸ್ ಟೇಬಲ್  ಹೆಚ್​.ಸಿ ಮಲ್ಲಿಕಾರ್ಜುನ​ ಕರ್ತವ್ಯ ನಿಷ್ಠೆ ಮೆರೆದಿದ್ದು,  ಈ ಘಟನೆ ನಗರದ ಕೋರಮಂಗಲದ ವಾಟರ್ ಟ್ಯಾಂಕ್ ಸಿಗ್ನಲ್ ಬಳಿ ನಡೆದಿದೆ.

ಇಂದು ಬೆಳಗ್ಗೆ ಬಸ್​ನಲ್ಲಿ ಬೆಂಗಳೂರಿಗೆ ಪ್ರವೀಣ್ ಹಾಗೂ ಭಾವನಿ ದಂಪತಿ ಬಂದಿದ್ದಾರೆ. ಕೋರಮಂಗಲ ವಾಟರ್ ಟ್ಯಾಂಕ್ ಸಿಗ್ನಲ್​ನಲ್ಲಿ ಬಸ್ ಇಳಿದಿದ್ದಾರೆ. ಈ ವೇಳೆ ಮನೆ ಹೋಗುವ ಆತುರದಲ್ಲಿ ಬ್ಯಾಗ್ ಬಿಟ್ಟಿದ್ದಾರೆ. ಅಲ್ಲೇ ಡ್ಯೂಟಿಯಲ್ಲಿ ಇದ್ದ ಆಡುಗೋಡಿ ಸಂಚಾರಿ ಠಾಣೆಯ ಹೆಡ್​ಕಾನ್ಸ್ ಟೇಬಲ್ ಹೆಚ್ ಸಿ ಮಲ್ಲಿಕಾರ್ಜುನ ನೋಡಿದ್ದಾರೆ.

ಬಳಿಕ ಆ ಬ್ಯಾಗ್ ಓಪನ್ ಮಾಡಿ ನೋಡಿದಾಗ ಚಿನ್ನಾಭರಣ ಇರೋದು ಗೊತ್ತಾಗಿದೆ. ಅದರಲ್ಲೇ ಇದ್ದ ನಂಬರ್​ಗೆ ಕರೆ ಮಾಡಿದ್ದಾರೆ. ಆ ಕರೆ  ಕೊಡಗಿನ ಪ್ರವೀಣ್ ಸಂಬಂಧಿಕ ರ ನಂಬರ್ ಗೆ ಹೋಗಿದ್ದು, ಅವ್ರು  ಪ್ರವೀಣ್​ಗೆ ಕರೆ ಮಾಡಿ ವಿಷಯ  ತಿಳಿಸಿದ್ದಾರೆ.

ಪ್ರವೀಣ್ ಬಂದು ಚಿನ್ನಾಭರಣ ಇದ್ದ ಬ್ಯಾಗ್ ಪಡೆದುಕೊಂಡಿದ್ದಾರೆ. ಆಡುಗೋಡಿ ಸಂಚಾರಿ ಠಾಣೆ ಹೆಡ್ ಕಾನ್ಸ್ ಟೇಬಲ್ ಮಲ್ಲಿಕಾರ್ಜುನಗೆ ದಂಪತಿ ಧನ್ಯವಾದ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು