ಬೆಂಗಳೂರು: ವಾಟರ್ ಟ್ಯಾಂಕರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಹಿಂಬದಿ ಸವಾರ ಸಾವನ್ನಪ್ಪಿದ್ದು, ಮತ್ತೊಬ್ಬ ಸವಾರ ಗಂಭೀರ ಗಾಯಗೊಂಡ ಘಟನೆ ಮಾಗಡಿ ರಸ್ತೆಯ ಕಾವೇರಿ ಫ್ಯಾಷನ್ಸ್ ಬಳಿ ನಡೆದಿದೆ.
ಬೈಕ್ ಹಿಂಬದಿ ಸವಾರ ಹರೀಶ್ ಸಾವನ್ನಪ್ಪಿದ ವ್ಯಕ್ತಿ. ಘಟನೆಯಲ್ಲಿ ಮತ್ತೊಬ್ಬ ಸವಾರ ಸುಚಿತ್ ಗೆ ಗಂಭೀರ ಗಾಯವಾಗಿದೆ.
ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೈಕ್ ಹಾಗೂ ವಾಟರ್ ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ದೃಶ್ಯದಲ್ಲಿ ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ಓರ್ವ ಸವಾರ ಹಾರಿ ಬಿದ್ದಿದ್ದಾನೆ.
ವಾಟರ್ ಟ್ಯಾಂಕರ್ ಬೈಕ್ ಹಾಗೂ ಇನ್ನೊಬ್ಬ ಸವಾರನನ್ನ ಎಳೆದುಕೊಂಡು ಹೋಗಿದೆ. ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.