ಫೆಬ್ರವರಿ 2 ರಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಬೆಂಗಳೂರು ನಗರ ಸೇರಿದಂತೆ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಇನ್ನು ಉಳಿದಂತೆ ತುಮಕೂರು, ವಿಜಯನಗರ, ಶಿವಮೊಗ್ಗ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ, ಚಳಿ ಇರಲಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಹವಾಮಾನ ವೈಪರಿತ್ಯ, ಚಂಡಮಾರುತ ಪರಿಚಲನೆ ತೀವ್ರತೆ ಇಳಿಕೆ ಆಗಿದೆ. ಒಂದು ವೇಳೆ ಮುಂದಿನ ನಾಲ್ಕೈ ದಿನಗಳಲ್ಲಿ ಅರಬ್ಬಿ ಸಮುದ್ರ ಇಲ್ಲವೇ ಬಂಗಾಳಕೊಲ್ಲಿಯಲ್ಲಿರುವ ಸುಳಿಗಾಳಿ, ಸ್ಟ್ರಪ್ ತೀವ್ರ ಸ್ವರೂಪ ಪಡೆದರೆ ರಾಜ್ಯದಲ್ಲಿ ಇನ್ನಿಲ್ಲದಂತೆ ಮಳೆ ಆವರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.