ಬೆಂಗಳೂರು: ಬೆಂಗಳೂರು ಮೈಸೂರು ಹೆದ್ದಾರಿ ಭಾರಿ ಮಳೆಯಿಂದಾಗಿ ಸಂಪೂರ್ಣ ಜಲಾವೃತವಾಗಿ ವಾಹನ ಸವಾರರು ಪರದಾಟ ಅನುಭವಿಸಿದ ವಿಷಯ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.
ಇದೀಗ ಬೆಂಗಳೂರು ನಗರದಲ್ಲಿಯೂ ಭಾರಿ ಮಳೆಯಾಗುತ್ತಿದೆ. ವೈಟ್ ಫೀಲ್ಡ್ ಸುತ್ತಮುತ್ತ ಮಳೆಯಿಂದ ಅವ್ಯವಸ್ಥೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ. ರಸ್ತೆಯಲ್ಲಿ ನಿಂತ ನೀರಿನಿಂದ ಬೈಕ್ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ನಗರದ ವರ್ತೂರು ಕೊಡಿ, ವರ್ತೂರು, ಪಣತ್ತೂರು ಸುತ್ತಮುತ್ತ ಸವಾರರ ಪರದಾಟ ನಡೆಸಿದ್ದು, ಈ ಹಿನ್ನಲೆ ವೈಟ್ ಫೀಲ್ಡ್ ಸಂಚಾರಿ ಹಾಗೂ ಎಚ್ಎಎಲ್ ಸಂಚಾರಿ ಪೊಲೀಸರು ‘ಬೈಕ್ ಸವಾರರು ಜಾಗೃತವಾಗಿ ತೆರಳುವಂತೆ ಟ್ವೀಟ್ ಮಾಡಿ ಸೂಚಿಸಿದ್ದಾರೆ. ಉಳಿದಂತೆ ಪೀಣ್ಯ, ದಾಸರಹಳ್ಳಿ, ಬಾಗಲಗುಂಟೆ, ಮಲ್ಲಸಂದ್ರ ಸೇರಿದಂತೆ ಹಲವು ಏರಿಯಾಗಳಲ್ಲಿ ಮಳೆಯಾಗಿದೆ.
‘Traffic Advisory ‘ Slow moving traffic due to Rain water logging at Nexus Whitefield ( forum Mall/ Manipal hospital Varthur)@CPBlr@Jointcptraffic @DCPTrEastBCP @acpwfieldtrf @blrcitytraffic @BBMPCares @ICCCBengaluru pic.twitter.com/YGB2EeLRR4
— WHITEFIELD TRAFFIC PS BTP (@wftrps) November 4, 2023