ಬೆಂಗಳೂರು

ಬೆಂಗಳೂರು ನಗರದಲ್ಲಿ ಭಾರಿ ಮಳೆ: ಟ್ವೀಟ್‌ ಮಾಡಿದ ಪೊಲೀಸರು ಹೇಳಿದ್ದೇನು

ಬೆಂಗಳೂರು: ಬೆಂಗಳೂರು ಮೈಸೂರು ಹೆದ್ದಾರಿ ಭಾರಿ ಮಳೆಯಿಂದಾಗಿ ಸಂಪೂರ್ಣ ಜಲಾವೃತವಾಗಿ ವಾಹನ ಸವಾರರು ಪರದಾಟ ಅನುಭವಿಸಿದ ವಿಷಯ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.

ಇದೀಗ ಬೆಂಗಳೂರು ನಗರದಲ್ಲಿಯೂ ಭಾರಿ ಮಳೆಯಾಗುತ್ತಿದೆ. ವೈಟ್ ಫೀಲ್ಡ್ ಸುತ್ತಮುತ್ತ ಮಳೆಯಿಂದ ಅವ್ಯವಸ್ಥೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ. ರಸ್ತೆಯಲ್ಲಿ ನಿಂತ ನೀರಿ‌ನಿಂದ ಬೈಕ್ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ನಗರದ ವರ್ತೂರು ಕೊಡಿ, ವರ್ತೂರು, ಪಣತ್ತೂರು ಸುತ್ತಮುತ್ತ ಸವಾರರ ಪರದಾಟ ನಡೆಸಿದ್ದು, ಈ ಹಿನ್ನಲೆ ವೈಟ್ ಫೀಲ್ಡ್ ಸಂಚಾರಿ ಹಾಗೂ ಎಚ್​ಎಎಲ್ ಸಂಚಾರಿ ಪೊಲೀಸರು ‘ಬೈಕ್ ಸವಾರರು ಜಾಗೃತವಾಗಿ ತೆರಳುವಂತೆ ಟ್ವೀಟ್​ ಮಾಡಿ ಸೂಚಿಸಿದ್ದಾರೆ. ಉಳಿದಂತೆ ಪೀಣ್ಯ, ದಾಸರಹಳ್ಳಿ, ಬಾಗಲಗುಂಟೆ, ಮಲ್ಲಸಂದ್ರ ಸೇರಿದಂತೆ ಹಲವು ಏರಿಯಾಗಳಲ್ಲಿ ಮಳೆಯಾಗಿದೆ.

Ashika S

Recent Posts

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

8 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

25 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

40 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

1 hour ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

1 hour ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago