News Karnataka Kannada
Thursday, May 09 2024
ಬೆಂಗಳೂರು

ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಮುಂದಿನ 5 ದಿನ ಮಳೆ

ಕಾದ ಕಾವಲಿಯಂತಾಗಿದ್ದ ಇಳೆಗೆ ಮಳೆಯೂ ಹರ್ಷ ತಂದಿದೆ. ಕಾಫಿನಾಡು ಚಿಕ್ಕಮಗಳೂರಲ್ಲಿ ಗುರುವಾರ ವರ್ಷದ ಮೊದಲ ಭರ್ಜರಿ ಮಳೆ ಸುರಿದಿದೆ. ಸುಮಾರು ಒಂದೇ ಗಂಟೆ ಕಾಲ ಸುರಿದ ಮಳೆಗೆ ಹಳ್ಳಿಗರು, ಬೆಳೆಗಾರರು ಸಂತಸಗೊಂಡಿದ್ದಾರೆ.
Photo Credit : News Kannada

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಕೆಲವೆಡೆ ಸೆಪ್ಟೆಂಬರ್ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳೂರು, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇನ್ನು ಕರಾವಳಿಯಲ್ಲಿ ವ್ಯಾಪಕವಾಗಿ ಮತ್ತು ಒಳನಾಡಿನಲ್ಲಿ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 4 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು