ಬೆಂಗಳೂರು: ಮೊನ್ನೆ ಮೊನ್ನೆಯಷ್ಟೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಪ್ರದೇಶಗಳಲ್ಲಿ ಎನ್ಐಎ ದಾಳಿ ನಡೆದಿತ್ತು.
ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿ ಶಂಕಿತ ಉಗ್ರ ಅಲಿ ಅಬ್ಬಾಸ್ನನ್ನು ಬಂಧಿಸಲಾಗಿತ್ತು. ಇದೀಗ ಮತ್ತೆ ಎನ್ಐಎ ಅಧಿಕಾರಿಗಳು ಶಿವಾಜಿನಗರ, ಪುಲಿಕೇಶಿನಗರ, ಸುಲ್ತಾನ್ ಪಾಳ್ಯ, ಆರ್.ಟಿ.ನಗರ, ಜೆ.ಸಿ.ನಗರದ ಚಿನ್ನಪ್ಪ ಗಾರ್ಡನ್ ಸೇರಿದಂತೆ ನಗರದ 20ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.
ಉಗ್ರ ಸಂಘಟನೆ ಐಸಿಸ್ ಜೊತೆ ಸಂಪರ್ಕ ಶಂಕೆ ಹಿನ್ನೆಲೆ ಡಿಸೆಂಬರ್ 9 ರಂದು ಪುಲಿಕೇಶಿನಗರದಲ್ಲಿರುವ ಮೋರ್ ರಸ್ತೆಯ ಅಲಿ ಅಬ್ಬಾಸ್ ಫ್ಲಾಟ್ ಮೇಲೆ ದಾಳಿ ನಡೆಸಿದ್ದ ಎನ್ಐಎ, 16 ಲಕ್ಷಕ್ಕೂ ಹೆಚ್ಚು ನಗದು ಹಾಗೂ ಲ್ಯಾಪ್ ಟಾಪ್, ಪೆನ್ ಡ್ರೈವ್ ಜಪ್ತಿ ಮಾಡಿದ್ದರು. ಅದರಂತೆ ಅಲಿ ಅಬ್ಬಾಸ್ ಮೊಬೈಲ್, ಲ್ಯಾಪ್ ಟಾಪ್ ರಿಟ್ರೀವ್ ಮಾಡಲಾಗಿತ್ತು. ಈ ವೇಳೆ ಮಹತ್ವದ ಮಾಹಿತಿ ಕಲೆ ಹಾಕಿದ್ದ ಎನ್ಐಎ ಅಧಿಕಾರಿಗಳು, ಇಂದು ಮತ್ತೆ ನಗರದ ಹಲವೆಡೆ ದಾಳಿ ನಡೆಸಿದ್ದಾರೆ.
ಮೂಲತಃ ಮುಂಬೈ ಮೂಲದ ಆಲಿ ಅಬ್ಬಾಸ್ ಪೇಟಿವಾಲ, ಸಾಪ್ಟ್ ವೇರ್ ಉದ್ಯೋಗಿಯಾಗಿದ್ದು, ಐಸಿಸ್ ನೊಂದಿಗೆ ಸಂಪರ್ಕ್ ಹೊಂದಿದ್ದ ಎಂದು ತಿಳಿದು ಬಂದಿದೆ. ಜೊತೆಗೆ ಈತ ಟ್ಯಾನರಿ ರೋಡ್ ನಲ್ಲಿ ಉರ್ದು ಶಾಲೆ ನಡೆಸ್ತಿದ್ದ. ಈತನ ಪತ್ನಿ ಡಯಾಟಿಕ್ ಹಾಸ್ಪಿಟಲ್ ನಡೆಸುತ್ತಿದ್ದಾಳೆ. ಪುಲಿಕೇಶಿನಗರದ ಮೋರ್ ರಸ್ತೆಯಲ್ಲಿ ಶಾಮಾಜ್ ಎಂಬುವರಿಂದ 2018ರಲ್ಲಿ 62 ಲಕ್ಷಕ್ಕೆ ಫ್ಲ್ಯಾಟ್ ಖರೀದಿ ಮಾಡಿದ್ದ ಅಲಿ, ತನ್ನ ಹೆಂಡತಿ ಮಕ್ಕಳು ಹಾಗೂ ತಂದೆ ಜೊತೆ ವಾಸವಿದ್ದನು.
ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…
ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.
ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.
ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್ಸಿಬಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ…