ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕರ್ತವ್ಯಕ್ಕೆ ಪ್ರೌಢಶಾಲಾ ಶಿಕ್ಷಕರಿಗೆ ಸಮ್ಮತಿ

ಬೆಂಗಳೂರು: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸುವ ಆದೇಶವನ್ನು ಇದೀಗ ಹಿಂಪಡೆದಿದೆ. ಬುಧವಾರ ಹೊರಡಿಸಿರುವ ಆದೇಶದ ಮೇರಗೆ ಪ್ರೌಢಶಾಲಾ ಶಿಕ್ಷಕರಿಗೆ ತರಬೇತಿ ನೀಡಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸುವಂತೆ ಎಲ್ಲ ಜಿಲ್ಲೆಗಳ ಉಪನಿರ್ದೇಶಕರಿಗೆ ಮಂಡಳಿ ತಿಳಿಸಿದೆ. ಮರಿತಿಪ್ಪೆಗೌಡ ಮತ್ತು ಇತರೆ ಶಾಸಕರು ಹಾಗೂ ಶಿಕ್ಷಕ ಸಮುದಾಯ ವರ್ಗದವರ ಮನವಿ ಮೇರೆಗೆ ಈ ಆದೇಶವನ್ನು ಹೊರಡಿಸಿದ್ದಾರೆ.

ಈ ಹಿಂದೆ ಮಾರ್ಚ್‌-ಏಪ್ರಿಲ್‌ ಪರೀಕ್ಷೆ ಸಮಯದಲ್ಲಿ ಪ್ರೌಢಶಾಲಾ ಶಿಕ್ಷಕರೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ವೇಳೆ ನಕಲು ಮಾಡಲು ಸಹಾಯ ಮಾಡುತ್ತಿದ್ದಾರೆ ಎಂದು ದೂರು ಕೇಳಿ ಬಂದಿತ್ತು ಈ ವಿಚಾರವಾಗಿ 38 ಶಿಕ್ಷಕರನ್ನು ಅಮಾನತುಗೊಳಿಸಲಾಗಿತ್ತು.

ಈ ಕಾರಣ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಇದಕ್ಕೆ ಅವಕಾಶ ಕೊಡಬಾರದು ಎಂಬ ಉದ್ದೇಶಕ್ಕೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ವೇಳೆ ಪ್ರಾಥಮಿಕ ಶಿಕ್ಷಕರನ್ನು ಆಯೋಜಿಸುವುದಾಗಿ ಆದೇಶ ಬಿಡುಗಡೆ ಮಾಡಿತ್ತು ಆದರೆ ಈ ಕ್ರಮಕ್ಕೆ ಶಿಕ್ಷಕರು ವಿರೋಧ ವ್ಯಕ್ತ ಪಡಿಸಿದ್ದು ಮತ್ತೊಮ್ಮೆ ಆದೇಶವನ್ನು ಪರಿಶೀಲಿಸುವಂತೆ ವಿಧಾನಪರಿಶತ್ತಿಗೆ ತಪ್ಪಣ್ಣ ಮತ್ತು ಮರಿತಿಪ್ಪೆಗೌಡ ಪತ್ರ ಬರೆದಿದ್ದರು. ಈ ಕಾರಣ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ತನ್ನ ಆದೇಶವನ್ನು ಹಿಂಪಡೆದಿದೆ.

Nisarga K

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

25 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

52 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

1 hour ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago