ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಮೋರಿಯಲ್ಲಿ ಬಿದ್ದಿದ್ದ ಮೃತದೇಹದ ಕೊಲೆ ಸಂಬಂಧಿತ ಆರೋಪಿಗಳನ್ನ ವಿಚಾರಣೆ ಮಾಡುವಾಗ ದರ್ಶನ್ ಹೆಸರು ಬಂದಿದೆ ಅಂತ ಮಾಹಿತಿ ಇದೆ. ಅದರ ಮೇಲೆ ತನಿಖೆ ಆಗುವವರೆಗೂ ಕೂಡ ಏನು ಹೇಳೋಕಾಗಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಹೇಳಿದ್ದಾರೆ.
ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಬಂಧಿಸಿದ ಬೆನ್ನಲ್ಲಿಯೇ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು, ಕೊಲೆ ಕೇಸ್ ನಲ್ಲಿ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿಗಳನ್ನ ವಿಚಾರಣೆ ಮಾಡುವಾಗ ದರ್ಶನ್ ಹೆಸರು ಬಂದಿದೆ ಅಂತ ಮಾಹಿತಿ ಇದೆ. ಅದರ ಮೇಲೆ ತನಿಖೆ ಆಗುವವರೆಗೂ ಕೂಡ ಏನು ಹೇಳೋಕಾಗಲ್ಲ. ಅವರು ನೇರವಾಗಿ ಭಾಗಿಯಾಗಿದ್ದಾರ ಇಲ್ವಾ.? ಯಾವ ಕಾರಣಕ್ಕೂ ಮರ್ಡರ್ ಆಗಿದೆ? ಇವರ ಹೆಸರು ಯಾಕೆ ಬಂದಿದೆ ಅನ್ನೋದು ತನಿಖೆ ನಂತರ ಗೊತ್ತಾಗುತ್ತದೆ ಎಂದು ತಿಳಿಸಿದ್ದಾರೆ.
ದರ್ಶನ್ನನ್ನು ಮೈಸೂರಿನಲ್ಲಿ ಅರೆಸ್ಟ್ ಮಾಡಿದ್ದು, ನಂತರ ಮೈಸೂರಿನಿಂದ ಬೆಂಗಳೂರು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಈಗ ನಮ್ಮ ಇಲಾಖೆಯ ಸುಪರ್ದಿಯಲ್ಲಿ ಇಟ್ಕೊಂಡಿದ್ದಾರೆ, ತನಿಖೆ ಮಾಡುತ್ತಿದ್ದಾರೆ. ಮೊದಲು ಅರೆಸ್ಟ್ ಮಾಡಿದ ವ್ಯಕ್ತಿಗಳು ದರ್ಶನ್ ಅವರ ಹೆಸರು ಹೇಳಿದ್ದಾರೆ. ಇದು ಮರ್ಡರ್ ಕೇಸ್ ಆಗಿರೋದ್ರಿಂದ ಸೀರಿಯಸ್ ಆಗಿ ಮಾಡಬೇಕಾಗತ್ತದೆ. ಹಾಗಾಗಿ ಅರೆಸ್ಟ್ ಮಾಡಿಕೊಂಡು ಬಂದಿದ್ದಾರೆ ಎಂದು ಹೇಳಿದರು.