ಇಂದಿನಿಂದ ಹೋಟೆಲ್ ಗ್ರಾಹಕರಿಗೂ ದರ ಏರಿಕೆ ಶಾಕ್​

ಬೆಂಗಳೂರು: ಇಂದಿನಿಂದ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳವಾಗಲಿದೆ. ಟೋನ್ಡ್‌ ಹಾಲಿನ ಹಿಂದಿನ ದರ 39 ರೂ., ಪರಿಷ್ಕೃತ ದರ 42 ರೂ. ಆಗಲಿದೆ. ಹೋಮೋಜಿನೈಸ್ಡ್ ಹಾಲಿನ ಹಿಂದಿನ ದರ 40 ರೂ., ಪರಿಷ್ಕೃತ ದರ 43 ರೂ. ಹಸುವಿನ ಹಾಲು(ಹಸಿರು ಪೊಟ್ಟಣ) ಹಿಂದಿನ ದರ 43, ಪರಿಷ್ಕೃತ ದರ 46 ರೂ. ಶುಭಂ ಹಾಲಿನ ಹಿಂದಿನ ದರ 45 ರೂಪಾಯಿ, ಪರಿಷ್ಕೃತ ದರ 48 ರೂ. ಮೊಸರು ಪ್ರತಿ ಲೀಟರ್​ಗೆ ಹಿಂದಿನ ದರ 47 ರೂ., ಪರಿಷ್ಕೃತ ದರ 50 ರೂ. ಮಜ್ಜಿಗೆ 200mಟ ಹಿಂದಿನ ದರ 8 ರೂಪಾಯಿ, ಪರಿಷ್ಕೃತ ದರ 9 ರೂ. ಆಗಲಿದೆ.

ಇದರ ಜೊತೆಗೆ ಇಂದಿನಿಂದ ಹೋಟೆಲ್​ ತಿಂಡಿ, ಆಹಾರದ ಮೇಲೆ ಶೇ.10ರಷ್ಟು ದರ ಏರಿಕೆಯಾಗಲಿದೆ. ಹಾಲು, ವಿದ್ಯುತ್​​, ಅಗತ್ಯ ವಸ್ತುಗಳ ದರ ಏರಿಕೆ ಹಿನ್ನೆಲೆ ಹೋಟೆಲ್​​ ತಿಂಡಿ, ಊಟ, ಟೀ, ಕಾಫಿ, ಆಹಾರಗಳ ದರ ಏರಿಕೆ ಮಾಡಲಾಗುತ್ತಿದೆ. ಇಂದಿನಿಂದ ಹೋಟೆಲ್​ ಆಹಾರದ ಪರಿಷ್ಕೃತ ದರ ಜಾರಿಯಾಗಲಿದೆ.

ರಾಜ್ಯ ಸರ್ಕಾರದ ಬಜೆಟ್​​ನಲ್ಲಿ ರಾಜಸ್ವ ಏರಿಕೆ ಹಿನ್ನೆಲೆ ಇಂದಿನಿಂದ ಮರಳು, ಜಲ್ಲಿ, ಗ್ರಾನೈಟ್​​​, ಕಬ್ಬಿಣ ಮತ್ತಷ್ಟು ದುಬಾರಿಯಾಗಲಿದೆ. ಮರಳು, ಎಂ-ಸ್ಯಾಂಡ್​​​, ಜಲ್ಲಿಕಲ್ಲು, ಗ್ರಾನೈಟ್​ ಬಂಡೆ, ಕಬ್ಬಿಣ ಮನೆ ನಿರ್ಮಾಣದ ಇನ್ನಿತರ ವಸ್ತುಗಳ ಪರಿಷ್ಕೃತ ದರ ಜಾರಿಯಾಗಿದ್ದು ಇಂದಿನಿಂದ ಮನೆ ನಿರ್ಮಾಣದ ವಸ್ತುಗಳು ದುಬಾರಿಯಾಗಲಿವೆ.

Ashitha S

Recent Posts

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

2 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

4 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

29 mins ago

ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿಯ ದುರಂತ ಅಂತ್ಯ

ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…

41 mins ago

ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರೋದೇ ಡೌಟ್; ರಿಟರ್ನ್‌ ಟಿಕೆಟ್‌ ಕ್ಯಾನ್ಸಲ್

ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ…

1 hour ago

ರಾಧಾ ರಮಣ ಧಾರವಾಹಿಯ ಜನಪ್ರಿಯ ನಟಿ ಪವಿತ್ರ ಜಯರಾಂ ನಿಧನ

ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.

1 hour ago