ಹುಬ್ಬಳ್ಳಿ: ಕಾಂಗ್ರೆಸ್ ಪಾರ್ಟಿಗೆ ಅನ್ ಕಂಡೀಷನ್ ಆಗಿ ಬಂದಿದ್ದೇನೆ .ಕ್ಯಾಬಿನೆಟ್ ನಲ್ಲಿ ನಾನು ಮಿನಿಸ್ಟರ್ ಆಗಬೇಕು ಅನ್ನೋದು ಜನರ ಅಭಿಲಾಷೆ ಇತ್ತು.ಹಲವು ಕಾರಣದಿಂದ ಆಗಿಲ್ಲ. ಇನ್ನು ಹಲವಾರು ಸ್ಥಾನಮಾನಗಳಿವೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸ್ಥಾನ ಕೊಟ್ಟರು ನಿಭಾಯಿಸಿ ಕೊಂಡು ಹೋಗುತ್ತೇನೆ . ಪಕ್ಷಕ್ಕೆ ಶಕ್ತಿ ಕೊಡಲು, ಪಕ್ಷದ ಪರವಾಗಿ ದುಡಿಯಲು ಸಿದ್ದನಿದ್ದೇನೆ. ಈಗಿನ ಸಂಪುಟ ರಚನೆ ನಂತರ ಕುಳಿತು ಚರ್ಚಿಸುವ ಬಗ್ಗೆ ಮಾತುಕತೆ ನಡೆದಿದೆ. ವೈಯಕ್ತಿಕವಾಗಿ ನಾನು ಯಾವುದೇ ಆಸೆ ವ್ಯಕ್ತಪಡಿಸಿಲ್ಲ. ಬಿಜೆಪಿಯಲ್ಲಿ ಆದ ಅಗೌರವದಿಂದ ನಾನು ಹೊರಗೆ ಬಂದೆ. ನನ್ನೊಬ್ಬನನ್ನ ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ ಎಂದರು.