ಬೆಂಗಳೂರು: ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ರನ್ನಾಗಿ ಆಯ್ಮೆ ಮಾಡಿದ ಬೆನ್ನಲ್ಲೇ ಇದೀಗ ವಿಧಾಸಭೆ ಹಾಗೂ ವಿಧಾನಪರಿಷತ್ ವಿರೋಧ ಪಕ್ಷ ನಾಯಕರ ಆಯ್ಕೆಗೆ ಹೈಕಮಾಂಡ್ ಮುಂದಾಗಿದ್ದು, ಇಂದು ಬಿಜೆಪಿ ಶಾಸಕಾಂಗ ಸಭೆ ನಿಗದಿಯಾಗಿದೆ. ಇದರ ಬೆನ್ನಲ್ಲೇ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅರವಿಂದ್ ಬೆಲ್ಲದ್ ತಮ್ಮ ರಾಜಕೀಯ ಆಟ ಶುರು ಮಾಡಿದ್ದಾರೆ.
ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ನೀಡಿರುವುದರಿಂದ ಅಸಮಾಧಾನಗೊಂಡಿರುವ ಯತ್ನಾಳ್ ಹಾಗೂ ಬೆಲ್ಲದ್ , ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ವಿಪಕ್ಷ ನಾಯಕ ಸ್ಥಾನವನ್ನು ಉತ್ತರ ಕರ್ನಾಟಕಕ್ಕೆ ನೀಡಬೇಕೆಂದು ಮನವಿ ಮಾಡಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಕಟ್ಟಿದ್ದರು. ಅಧ್ಯಕ್ಷ ಹುದ್ದೆ ಸಿಗಲಿಲ್ಲ ಅಂದ್ರೆ ವಿರೋಧ ಪಕ್ಷದ ನಾಯಕನನ್ನಾಗಿ ಮಾಡಿ ಎಂದು ಬೇಡಿಕೆ ಇಟ್ಟಿದ್ದರು.
ಈಗ ರಾಜ್ಯಾಧ್ಯಕ್ಷ ಹುದ್ದೆ ಕೈತಪ್ಪಿ ಹೋಗಿದ್ದು, ವಿರೋಧ ಪಕ್ಷದ ನಾಯಕನನ್ನಾಗಿ ಮಾಡಿ ಎಂದು ಪಟ್ಟು ಹಿಡಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯತ್ನಾಳ್, ಚುನಾವಣೆ ವೇಳೆ ಆಗಿರುವ ಬೆಳವಣಿಗೆ ಬಗ್ಗೆ ಎಲ್ಲವನ್ನೂ ವಿವರಿಸಿದ್ದೇನೆ. ಧೈರ್ಯದಿಂದ ನಾನು ಎಲ್ಲವನ್ನೂ ಹೇಳಿದ್ದೇನೆ. ದೇಶದಲ್ಲಿ ನಾವು ಉಳಿಯಬೇಕಾದರೆ ಮೋದಿ ಮತ್ತೆ ಪ್ರಧಾನಿ ಆಗಬೇಕು. ವರಿಷ್ಠರು ಕೆಲವೇ ಚೇಲಾಗಳ ಮಾತುಕೇಳಿ ನಿರ್ಧಾರ ತೆಗೆದುಕೊಳ್ಳಬಾರದು. ಕೆಲವರು ಬ್ಲ್ಯಾಕ್ಮೇಲ್ ಮಾಡಲು ಪ್ರಯತ್ನ ಮಾಡುತ್ತಾರೆ. ಇದಕ್ಕೆ ನಾನು ಭಯಪಡುವುದಿಲ್ಲ ಎಂದಿದ್ದಕ್ಕೆ ಇಬ್ಬರೂ ಬಹಳ ಖುಷಿಯಾದರು. ನೀವು ಎಲ್ಲವನ್ನೂ ಧೈರ್ಯವಾಗಿ ಹೇಳಿದ್ದೀರಿ ಎಂದು ವೀಕ್ಷಕರು ಹೇಳಿದರು ಎಂದು ಪಾಟೀಲ್ ಹೇಳಿದ್ದಾರೆ.