News Karnataka Kannada
Sunday, April 28 2024
ಬೆಂಗಳೂರು

ನಾನೇ ಮಾಹಿತಿ ಕೊಟ್ಟರು ಪೊಲೀಸರು ಕ್ರಮ ತೆಗೆದುಕೊಂಡಿಲ್ಲ: ಶಾಸಕ ಮುನಿರತ್ನ

I informed the police but the police did not come: MLA Munirathna
Photo Credit : Facebook

ಬೆಂಗಳೂರು:  ಆರ್ ಆರ್  ನಗರ ಕ್ಷೇತ್ರದಲ್ಲಿ 20 ಕೆಜಿ ಗಾಂಜಾ ಮಾರಾಟ ಆಗ್ತಿದೆ. ಈ ಬಗ್ಗೆ ನಾನೇ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದೇನೆ. ಆದರೂ ಇಲ್ಲಿನ ಇನ್ಸ್‌ಪೆಕ್ಟರ್ ಕ್ರಮ ತೆಗೆದುಕೊಂಡಿಲ್ಲ ಎಂದು ಶಾಸಕ ಮುನಿರತ್ನ ಪೊಲೀಸ್ ಇಲಾಖೆ ವಿರುದ್ಧ ಕಿಡಿಕಾರಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ನನ್ನ ಕ್ಷೇತ್ರ ಗಾಂಜಾ ಅಡ್ಡೆಯಾಗಿದೆ, ಇದಕ್ಕೆ ಕಾರಣ ಯಾರು ಅನ್ನೋದು ಗೊತ್ತು ಬೆಳಗಾವಿ ಅಧಿವೇಶನದಲ್ಲಿ ಎಲ್ಲವನ್ನೂ ದಾಖಲೆ ಸಮೇತ ಹೆಸರುಗಳನ್ನ ಹೇಳ್ತಿನಿ. ಇವರು ವರ್ಗಾವಣೆ ದಂಧೆಯ ಹಿನ್ನಲೆಯಿಂದ ಬಂದಿದ್ದಾರೆ. ಇಂಥವರು ಹೇಗೆ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯ? ಇಸ್ಪೀಟ್ ದಂಧೆ ನಡೆಸುವವರು, ಬಾರ್ ಆ್ಯಂಡ್ ರೆಸ್ಟೋರೆಂಟ್ ನಡೆಸುವವರ ಆಧಿಕಾರ ಆಗಿದೆ ಇಲ್ಲಿ ಎಂದರು.

ಮಾಸ್ಕ್ ಧರಿಸಿ ಪುಂಡರು ಏರಿಯಾ ಒಂದರಲ್ಲೇ ಹದಿನೈದಕ್ಕೂ ಹೆಚ್ಚು ವಾಹನಗಳ ಗಾಜು ಪುಡಿಪುಡಿ ಮಾಡಿದ್ದಾರೆ. ದ್ವಿಚಕ್ರ ವಾಹನದಲ್ಲಿ ಬಂದು ಲಾಂಗು ಮಚ್ಚಿನಿಂದ ಅಟ್ಯಾಕ್‌ ಮಾಡಿದ್ದಾರೆ. ಇಷ್ಟೆಲ್ಲ ಆಗಿ ಸ್ಥಳಕ್ಕೆ ಮಾಧ್ಯಮದವರು ಬಂದರು ಪೊಲೀಸರು ಬಂದಿಲ್ಲ ಎಂದು ಶಾಸಕರು ದೂರಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು