ಬೆಂಗಳೂರು: ಆರ್ ಆರ್ ನಗರ ಕ್ಷೇತ್ರದಲ್ಲಿ 20 ಕೆಜಿ ಗಾಂಜಾ ಮಾರಾಟ ಆಗ್ತಿದೆ. ಈ ಬಗ್ಗೆ ನಾನೇ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದೇನೆ. ಆದರೂ ಇಲ್ಲಿನ ಇನ್ಸ್ಪೆಕ್ಟರ್ ಕ್ರಮ ತೆಗೆದುಕೊಂಡಿಲ್ಲ ಎಂದು ಶಾಸಕ ಮುನಿರತ್ನ ಪೊಲೀಸ್ ಇಲಾಖೆ ವಿರುದ್ಧ ಕಿಡಿಕಾರಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ನನ್ನ ಕ್ಷೇತ್ರ ಗಾಂಜಾ ಅಡ್ಡೆಯಾಗಿದೆ, ಇದಕ್ಕೆ ಕಾರಣ ಯಾರು ಅನ್ನೋದು ಗೊತ್ತು ಬೆಳಗಾವಿ ಅಧಿವೇಶನದಲ್ಲಿ ಎಲ್ಲವನ್ನೂ ದಾಖಲೆ ಸಮೇತ ಹೆಸರುಗಳನ್ನ ಹೇಳ್ತಿನಿ. ಇವರು ವರ್ಗಾವಣೆ ದಂಧೆಯ ಹಿನ್ನಲೆಯಿಂದ ಬಂದಿದ್ದಾರೆ. ಇಂಥವರು ಹೇಗೆ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯ? ಇಸ್ಪೀಟ್ ದಂಧೆ ನಡೆಸುವವರು, ಬಾರ್ ಆ್ಯಂಡ್ ರೆಸ್ಟೋರೆಂಟ್ ನಡೆಸುವವರ ಆಧಿಕಾರ ಆಗಿದೆ ಇಲ್ಲಿ ಎಂದರು.
ಮಾಸ್ಕ್ ಧರಿಸಿ ಪುಂಡರು ಏರಿಯಾ ಒಂದರಲ್ಲೇ ಹದಿನೈದಕ್ಕೂ ಹೆಚ್ಚು ವಾಹನಗಳ ಗಾಜು ಪುಡಿಪುಡಿ ಮಾಡಿದ್ದಾರೆ. ದ್ವಿಚಕ್ರ ವಾಹನದಲ್ಲಿ ಬಂದು ಲಾಂಗು ಮಚ್ಚಿನಿಂದ ಅಟ್ಯಾಕ್ ಮಾಡಿದ್ದಾರೆ. ಇಷ್ಟೆಲ್ಲ ಆಗಿ ಸ್ಥಳಕ್ಕೆ ಮಾಧ್ಯಮದವರು ಬಂದರು ಪೊಲೀಸರು ಬಂದಿಲ್ಲ ಎಂದು ಶಾಸಕರು ದೂರಿದರು.