News Karnataka Kannada
Monday, April 29 2024
ಬೆಂಗಳೂರು

ಗುತ್ತಿಗೆದಾರರನ್ನು ನವದೆಹಲಿಗೆ ಕರೆಸಿಕೊಂಡಿದ್ಯಾರೆಂದು ಗೊತ್ತು: ಡಿಕೆಶಿ

BJP-sponsored contractors spreading misinformation against govt: Shivakumar
Photo Credit : News Kannada

ಬೆಂಗಳೂರು: ಗುತ್ತಿಗೆದಾರರಿಗೆ ಬಿಲ್‌ ಪಾವತಿಸುವ ಮೊದಲು ತನಿಖೆ ನಡೆಸಲಾಗುವುದು ಎಂದು ಡಿಸಿಎಂ ಶಿವಕುಮಾರ್‌ ಹೇಳಿದ್ದಾರೆ. ಪ್ರಚಾರಕ್ಕಾಗಿ ಯಾರು ಏನು ಬೇಕಾದರೂ ಮಾಡಿಕೊಳ್ಳಲಿ. ಆದರೆ ಗುತ್ತಿಗೆದಾರರ ಸಂಘದವರ ಬಿಲ್‌ ಪಾವತಿಗೆ ಮೊದಲು ತನಿಖೆ ನಡೆಸಲಾಗುವುದು. ನಗರದಲ್ಲಿ ಕೈಗೊಂಡ ಕಾಮಗಾರಿಗಳ ಬಿಲ್‌ಗಳ ಸತ್ಯಾಸತ್ಯತೆ ಪರಿಶೀಲಿಸಲು ಕಾಂಗ್ರೆಸ್ ಸರ್ಕಾರ ಎಸ್‌ಐಟಿ ರಚಿಸಲಾಗಿದ್ದು, ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಗುತ್ತಿಗೆದಾರರನ್ನು ನವದೆಹಲಿಗೆ ಕರೆಯಿಸಿ ಹೇಳಿಕೆಗಳನ್ನು ನೀಡುವಂತೆ ಪ್ರೇರೇಪಿಸುತ್ತಿರುವುದು ಯಾರು? ದೂರಿನ ಕುರಿತು ಮಾಧ್ಯಮದ ಮುಂದೆ ಹೇಳಿಕೆ ನೀಡುವಂತೆ ಮಾಡುತ್ತಿರುವವರು ಯಾರು ಎಂಬುದು ನನಗೆ ಗೊತ್ತು. ಕಾಮಗಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ ಗುತ್ತಿಗೆದಾರರಿಗೆ ಸರಕಾರ ನ್ಯಾಯ ಒದಗಿಸಲಿದೆ ಎಂದರು.

ಕಾಮಗಾರಿ ಬಿಲ್‌ ಪಾವತಿಗಾಗಿ ಸರ್ಕಾರದ ವಿರುದ್ಧ ಸಮರ ಸಾರಿರುವ ಗುತ್ತಿಗೆದಾರರು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊರೆಹೋಗಿದ್ದು, ಬಾಕಿ ಬಿಲ್‌ ಪಾವತಿ ಸಂಬಂಧ ಸಹಕಾರ ಒದಗಿಸುವಂತೆ ಮನವಿ ಮಾಡಿದ್ದರು. ಅಲ್ಲದೆ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್‌ಗೆ ಕೂಡ ಗುತ್ತಿಗೆದಾರರ ಸಂಘದವರು ದೂರು ನೀಡಿದ್ದಾರೆ. ಕಳೆದ 26 ತಿಂಗಳಿಂದ ಸರ್ಕಾರ ಬಿಲ್‌ಗಳನ್ನು ಬಾಕಿ ಉಳಿಸಿಕೊಂಡಿದೆ ಎಂದು ಬಿಬಿಎಂಪಿ ಗುತ್ತಿಗೆದಾರರ ಸಂಘವು ಆರೋಪಿಸಿದೆ. ಬಾಕಿ ಬಿಲ್‌ಗಳ ತೆರವಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ನಿರ್ಧರಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು