ಬೆಂಗಳೂರು: ಜಗದೀಶ್ ಶೆಟ್ಟರ್ ಬೆನ್ನಲ್ಲೇ ಸವದಿ ಕೂಡ ಬಿಜೆಪಿ ಸೇರುತ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಶಾಸಕ ಲಕ್ಷ್ಮಣ್ ಸವದಿ ನನ್ನ ನಿಲುವು ಸ್ಪಷ್ಟ. ನಾನು ಬಿಜೆಪಿಗೆ ಹೋಗಲ್ಲ ಎಂದು ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಾನು ಮೊದಲು ಕಾಂಗ್ರೆಸ್ಗೆ ಬಂದೆ. ಟಿಕೆಟ್ ಸಿಗದ ಕಾರಣ ಅವರು ನಂತರ ಬಂದರು. ಯಾಕೆ ಹೋಗಿದ್ದಾರೆ ಅಂತ ಗೊತ್ತಿಲ್ಲ, ಅವರನ್ನೇ ಕೇಳಬೇಕು. ನನ್ನನ್ನ ಬಿಜೆಪಿ ಸಂಪರ್ಕ ಮಾಡಿಲ್ಲ, ನಾನು ಎಲ್ಲೂ ಹೋಗಲ್ಲ. ಇದು ನನ್ನ ತೀರ್ಮಾನ ಎಂದರು.
ಶೆಟ್ಟರ್ ವೈಯಕ್ತಿಕ ವಿಚಾರವಾಗಿ ನಿರ್ಧಾರ ಮಾಡಿದ್ದಾರೆ. ನನ್ನಿಂದಲೇ ಎಲ್ಲಾ ಆಗುತ್ತೆ ಅನ್ನೋಕೆ ಆಗಲ್ಲ. ಶೆಟ್ಟರ್ ಹೋಗಿರೋದು ದೊಡ್ಡ ಬದಲಾವಣೆ ಆಗೋದಿಲ್ಲ ಅನಿಸುತ್ತೆ ಎಂದರು.
ಈಗ ಯಾಕೆ ಬಿಜೆಪಿಗೆ ಹೋಗಿದ್ದಾರೆ ಅಂತ ಗೊತ್ತಿಲ್ಲ. ನಾನು ಅವರು ಸ್ನೇಹಿತರು. ದಿನ ನಾವಿಬ್ಬರು ಮಾತನಾಡುತ್ತೇವೆ. ಆದರೆ ಅವರು ಈ ನಿರ್ಧಾರ ಮಾಡ್ತಾರೆ ಅಂತ ಗೊತ್ತಿರಲಿಲ್ಲ. ಲೋಕಸಭೆ ಚುನಾವಣಾ ಹಿನ್ನೆಲೆ ಅವರಿಗೆ ನಮ್ಮ ಅನಿರ್ವಾಯತೆ ಇದೆ ಹಾಗಾಗಿ ಸಂಪರ್ಕ ಮಾಡ್ತಾ ಇದ್ದಾರೆ ಎಂದು ಹೇಳಿದರು.