ಬೆಂಗಳೂರು: ಫುಟ್ಪಾತ್ಗಳಲ್ಲಿನ ಅಕ್ರಮ ಅಂಗಡಿಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ವೇಳೆ ಓರ್ವ ವ್ಯಾಪಾರಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಜಯನಗರದಲ್ಲಿ ನಡೆದಿದೆ.
ಮೃತನನ್ನು ಕೃಷ್ಣ(49) ಎಂದು ಗುರುತಿಸಲಾಗಿದೆ.
ಜಯನಗರದಲ್ಲಿ ಕಳೆದ 25 ವರ್ಷಗಳಿಂದ ತಾಯಿ ರತ್ನಮ್ಮ ಜೊತೆ ವ್ಯಾಪಾರ ನಡೆಸುತ್ತಿದ್ದರು, ಅಧಿಕಾರಿಗಳು ಇವರ ವ್ಯಾಪಾರಕ್ಕೆ ಅವಕಾಶ ನೀಡದ ಹಿನ್ನಲೆ ಹಾಗೂ ಅಂಗಡಿ ಕೆಡವಿದ ಹಿನ್ನಲೆ ಮನನೊಂದು ಈ ಘಟನೆ ಸಂಭವಿಸಿದೆ. ಇನ್ನು ಈ ಘಟನೆ ಕಳೆದ ನಾಲ್ಕು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನವೆಂಬರ್ 07 ರಂದು ಬಿಬಿಎಂಪಿ ಮಾರ್ಷಲ್ಗಳ ತಂಡ ಸ್ಥಳಕ್ಕೆ ಆಗಮಿಸಿ, ಫುಟ್ಪಾತ್ನಲ್ಲಿದ್ದ ಅಕ್ರಮ ಶೆಡ್, ಬಟ್ಟೆ ಅಂಡಿಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತೆರವುಗೊಳಿಸಿತ್ತು. ಆ ಮೂಲಕ ಪಾದಚಾರಿಗಳ ಮಾರ್ಗ ಸುಗಮಗೊಳಿಸಲಾಗಿತ್ತು.
ಬಳಿಕ ಈ ಕುರಿತು ಮಾತನಾಡಿದ್ದ ಉಸ್ತುವಾರಿ ಅಧಿಕಾರಿ ಸೋಮಶೇಖರ್, ‘ಸುಮಾರು 200 ಅನಧಿಕೃತ ಮಳಿಗೆಗಳನ್ನು ತೆಗೆದುಹಾಕಲಾಗಿದೆ. ಈ ಎಲ್ಲಾ ಬೀದಿ ಬದಿ ವ್ಯಾಪಾರಸ್ಥರು ಅಕ್ರಮವಾಗಿ ವ್ಯಾಪಾರ ನಡೆಸುತ್ತಿದ್ದಾರೆ ಎಂದು ತಿಳಿಸಿ ಫುಟ್ ಪಾತ್ ತೆರವು ಮಾಡಬೇಕು ಎಂದು 6 ತಿಂಗಳ ಹಿಂದೆ ಹೇಳಲಾಗಿತ್ತು. ಮೂರು ತಿಂಗಳ ಹಿಂದೆ ಮತ್ತೆ ಎಚ್ಚರಿಕೆ ನೀಡಿಲಾಗಿತ್ತು. ಅಷ್ಟೇ ಅಲ್ಲ, ನವೆಂಬರ್ 4 ರಂದು ನಾವು ಈ ಪ್ರದೇಶದಲ್ಲಿ ತೆರೆದ ಮೈಕ್ ಬಳಸಿ, ಅಕ್ರಮ ಮಳಿಗೆಗಳನ್ನು ತೆರವುಗೊಳಿಸುವುದಾಗಿ ಹೇಳಿದ್ದೇವು. ಆ ಹಿನ್ನೆಲೆ ನಾವು ಫುಟ್ಪಾತ್ಗಳಲ್ಲಿನ ಅಕ್ರಮ ಅಂಗಡಿಗಳನ್ನು ನೆಲಸಮಗೊಳಿಸಿದ್ದೇವೆ ಎಂದು ಹೇಳಿದ್ದರು.