ಬೆಂಗಳೂರು: ಬಾಂಗ್ಲಾದ ಗಡಿಯ ಮೂಲಕ ವಿದೇಶಿಗರನ್ನು ಅಕ್ರಮವಾಗಿ ಗಡಿದಾಟಿಸುತ್ತಿದ್ದ ೧೨ ಬಾಂಗ್ಲಾ ಪ್ರಜೆಗಳ ವಿರುದ್ಧ ಎನ್.ಐ.ಎ ಚಾರ್ಜ್ಶೀಟ್ ಸಲ್ಲಿಸಿದ್ದು, ಅದರಲ್ಲಿ ಅನೇಕ ಸ್ಫೋಟಕ ಮಾಹಿತಿಗಳು ಬಹಿರಂಗವಾಗಿದೆ.
ಉದ್ಯೋಗ ಮತ್ತು ಉತ್ತಮ ಜೀವನೋಪಾಯದ ಆಮಿಷವೊಡ್ಡಿ ವಿದೇಶಿಗರನ್ನು ಭಾರತದ ಒಳಗೆ ನುಸುಳಿಸಿ ಅವರನ್ನೆಲ್ಲ ಬೆಂಗಳೂರಿನ ತ್ಯಾಜ್ಯ ವಿಂಗಡಣಾ ಗೋದಾಮಿನಲ್ಲಿ ಇರಿಸಲಾಗಿತ್ತು ಎಂದು ತಿಳಿದುಬಂದಿದೆ.
ಕಡಿಮೆ ವೇತನ ನೀಡಿ ಅವರನ್ನು ದುಡಿಸಿಕೊಳ್ಳುತ್ತಿದ್ದದ್ದು ಅಷ್ಟೇ ಅಲ್ಲ, ಪ್ರತಿಭಟಿಸಿದರೆ ಅಕ್ರಮ ವಲಸಿಗರೆಂದು ಜೈಲಿಗೆ ಹಾಕಿಸುವುದಾಗಿ ಹೆದರಿಸಲಾಗಿತ್ತೆಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.
12 ಆರೋಪಿಗಳ ಬಳಿ 61 ಆಧಾರ್ ಕಾರ್ಡ್ಗಳು ಮತ್ತು ಇತರೆ ಭಾರತೀಯ ಗುರುತಿನ ದಾಖಲೆಗಳು ಪತ್ತೆಯಾಗಿದ್ದು, ಎನ್ಐಎ ವಶಕ್ಕೆ ಪಡೆದುಕೊಂಡಿತ್ತು.