ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ನಿವಾಸದ ಮೇಲೆ ಐಟಿ ಅಧಿಕಾರಿಗಳು ನಡೆಸಿದಾಗ 42 ಕೋಟಿ ರೂ. ದೊರೆತಿತ್ತು. ಇದೀಗ ಅಂತಹುದೇ ಮತ್ತೊಂದು ದಾಳಿ ನಡೆದಿದೆ.
ರಾಜಾಜಿನಗರದ ಕೇತಮಾರನಹಳ್ಳಿ ಅಪಾರ್ಟ್ಮೆಂಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ಈ ವೇಳೆ 40 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ನಿನ್ನೆ (ಅ.14) ಬೆಳಗ್ಗೆ ಬಿಲ್ಡರ್ ಸಂತೋಷ್ ನಿವಾಸದ ಮೇಲೆ ಐಟಿ ತಂಡ ದಾಳಿ ನಡೆಸಿತ್ತು. ಬೆಳಗ್ಗೆ 6ರಿಂದ ಇಡೀ ದಿನ ಅಪಾರ್ಟ್ಮೆಂಟ್ನ 5ನೇ ಮಹಡಿಯ ಫ್ಲ್ಯಾಟ್ನಲ್ಲಿ ದಾಖಲೆ ಪರಿಶೀಲನೆ ನಡೆಸಿತ್ತು. ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆಯಾಗಿದ್ದು ಆ ಹಣ ಮಾಜಿ ಎಂಎಲ್ಸಿಗೆ ಸೇರಿದ್ದು ಎನ್ನಲಾಗಿದೆ.
ಬಿಲ್ಡರ್ ಸಂತೋಷ್ ಮನೆಯಲ್ಲಿ ಹಣ ಪತ್ತೆಯಾದ ಬಗ್ಗೆ ವಿಚಾರಣೆ ನಡೆಸಿದಾಗ ಸಂತೋಷ್ ಮಾಜಿ ಎಂಎಲ್ ಸಿ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಹೀಗಾಗಿ ಐಟಿ ಅಧಿಕಾರಿಗಳು ಪತ್ತೆಯಾದ ಹಣದ ಮೂಲ ಕಂಡು ಹಿಡಿಯಲು ಮಾಜಿ ಎಂಎಲ್ಸಿ ಸಹೋದರರನ್ನು ಫ್ಲ್ಯಾಟ್ಗೆ ಕರೆಸಿಕೊಂಡು ವಿಚಾರಣೆ ನಡೆಸಿದ್ದಾರೆ. ಹಣ ಪತ್ತೆಯಾಗುತ್ತಿದ್ದಂತೆ 6ಕ್ಕೂ ಹೆಚ್ಚು ಕಾರುಗಳಲ್ಲಿ 10ಕ್ಕೂ ಹೆಚ್ಚು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ದಾಖಲೆಗಳನ್ನು ವಶಕ್ಕೆ ಪಡೆದ ಐಟಿ ಅಧಿಕಾರಿಗಳು: 3ಟ್ರಂಕ್, 3ಬ್ಯಾಗ್, 1ಸೂಟ್ಕೇಸ್ನಷ್ಟು ವಸ್ತು ವಶಕ್ಕೆ ಪಡೆಯಲಾಗಿದೆ. ಅಧಿಕಾರಿಗಳು ವಶಕ್ಕೆ ಪಡೆದ ವಸ್ತುಗಳನ್ನು 2 ಕಾರುಗಳಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಸತತ 18 ಗಂಟೆಗಳ ಕಾಲ ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಯಿತು. ಕೊನೆಗೆ ವಿಚಾರಣೆ ಮುಗಿಸಿ ಸಂತೋಷ್ಗೆ ನೋಟಿಸ್ ನೀಡಿ ಐಟಿ ತಂಡ ತೆರಳಿದೆ. ಪತ್ತೆಯಾದ ಹಣದ ಬಗ್ಗೆ ಮತ್ತಷ್ಟು ಮಾಹಿತಿ ನೀಡುವಂತೆ ನೋಟಿಸ್ ನೀಡಲಾಗಿದೆ.
ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.
ಬಿಗ್ಬಾಸ್ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್ ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…
ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಾವು ಪ್ರತಿದಿನ ಸೋಶಿಯಲ್ ಮಿಡಿಯಾಗಳಲ್ಲಿ ಹಲವಾರು ಟ್ವೀಟ್ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್ ಗಳು ನಮ್ಮನ್ನು ನಗುವಂತೆ…
ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ಈಗ ಮತ್ತೊಂದು ವಿವಾದಾತ್ಮಕ…
ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.