ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಸೋಂಕು ಉಲ್ಭಣಗೊಂಡಿದೆ. ಬೆಂಗಳೂರಿನಲ್ಲಿ ಡೆಂಘೀಗೆ 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಹಾಸನದಲ್ಲಿ ಶಂಕಿತ ಡೆಂಗ್ಯು ಜ್ವರಕ್ಕೆ ಮೂವರು ಹೆಣ್ಣು ಮಕ್ಕಳು ಬಲಿಯಾದ ಬೆನ್ನಲ್ಲೇ ಈ ಸುದ್ದಿ ಬಂದಿದೆ.

ಅಂಜನಾಪುರದ 11 ವರ್ಷದ ಬಾಲಕ ಗಗನ್ ಜ್ವರದಿಂದ ಸಾವಿಗೀಡಾಗಿದ್ದು, ಇದು ಬೆಂಗಳೂರಿನಲ್ಲಿ ಡೆಂಗ್ಯುವಿಗೆ ಪುಟ್ಟ ಮಗುವಿನ ಮೊದಲ ಸಾವು ಆಗಿದೆ. ನಿನ್ನೆ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಬಾಲಕ ಅಸುನೀಗಿದ್ದಾನೆ. ಈತ ಜಂಬೂಸವಾರಿ ದಿಣ್ಣೆಯ ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದ. ಕಳೆದ ಮೂರು ದಿನಗಳಿಂದ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈತ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾನೆ.