ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಬೆಂಗಳೂರಿನಲ್ಲಿ ಆತ್ಮಹತ್ಯೆ ಧನಲಕ್ಷ್ಮೀ(25) ಅವರು ನೇಣಿಗೆ ಶರಣಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರಿಶಿನಕುಂಟೆ ಆದರ್ಶನಗರದ ನಿವಾಸದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆಗಿದ್ದ ಅವರ ಮೊನ್ನೆ ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಮನೆಗೆ ವಾಪಸ್ಸು ಬಂದ ಬಳಿಕ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .ಅಂತಾರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬ್ಬಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಧನಲಕ್ಷ್ಮೀ, ಕಾಡುಗೋಡಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ಬಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಗೊಂಡಿದ್ಧಾರೆ.