News Karnataka Kannada
Sunday, May 12 2024
ಬೆಂಗಳೂರು

ನನಗೆ ಟಿಕೆಟ್‌ ತಪ್ಪಿಸಿದ್ದು, ಬಿ.ಎಲ್‌. ಸಂತೋಷ್‌ ಸುದ್ದಿಗೋಷ್ಠಿಯಲ್ಲಿ ಶೆಟ್ಟರ್‌ ಆಕ್ರೋಶ

Hubballi: Jagadish Shettar said that the Congress will decline in the country at present.
Photo Credit : News Kannada

ಬೆಂಗಳೂರು: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದಿಶ್ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿದ್ದು, ತಮಗೆ ಟಿಕೆಟ್​ ಕೈತಪ್ಪಲು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್​ ಸಂತೋಷ್​ ಕಾರಣ ಎಂದು ಆರೋಪ ಮಾಡಿದ್ದಾರೆ.

ನನ್ನ ವಿರುದ್ದ ಬಿಎಲ್ ಸಂತೋಷ್ ಅವರು ಹೈಕಮಾಂಡ್ ಬಳಿ ಅಪಪ್ರಚಾರ ಮಾಡಿದರು. ಅವರಿಂದಲೇ ನನಗೆ ಟಿಕೆಟ್ ತಪ್ಪಿತ್ತು. ಕೋರ್​ ಕಮಿಟಿ ಸಭೆಯಲ್ಲಿ ನನ್ನ ಹೆಸರು ಜೊತೆ ಒಟ್ಟು ಮೂವರ ಆಕಾಂಕ್ಷಿಗಳ ಹೆಸರುಗಳನ್ನು ಕಳುಹಿಸಲಾಗಿತ್ತು. ಸ್ಕ್ರೀನಿಂಗ್ ಕಮಿಟಿಯಲ್ಲಿ ನನ್ನ ಹೆಸರಿತ್ತು. ಆದ್ರೆ, ಕೊನೆಗೆ ಟಿಕೆಟ್​ ಕೈತಪ್ಪುವುದಕ್ಕೆ ಸಂತೋಷ್ ಕಾರಣ. ಉಳಿದಂತೆ ರಾಮದಾಸ್ ಸಂತೋಷ್ ಆಪ್ತ ಅಲ್ಲ. ಶ್ರೀವತ್ಸ ಸಂತೋಷ್ ಅವರ ಆಪ್ತ. ಹಾಗಾಗಿ ರಾಮದಾಸ್​ಗೆ ಟಿಕೆಟ್​ ಕೈತಪ್ಪಿದ್ದು, ಶ್ರೀವತ್ಸಗೆ ಟಿಕೆಟ್ ಸಿಕ್ಕಿದೆ.

ರಾಮದಾಸ್ ಬಂಡಾಯ ಎದ್ದರೆ ಗೆಲ್ಲುವುದಕ್ಕೆ ಆಗಲ್ಲ. ಬಿಎಲ್ ಸಂತೋಷ್ ಕೇರಳದಲ್ಲಿ ಚುನಾವಣೆ ಉಸ್ತುವಾರಿ ವಹಿಸಿಕೊಂಡರು. ಒಂದು ಸೀಟ್ ಬರಲಿಲ್ಲ. ತಮಿಳುನಾಡಿಲ್ಲಿ ಎರಡು ಮೂರು ಸೀಟ್ ಬಂತು. ಇವತ್ತು ಕರ್ನಾಟಕದಲ್ಲಿ ಕಾರಬಾರು ಮಾಡುತ್ತಿದ್ದಾರೆ ಎಂದು ಸಂತೋಷ್​ ವಿರುದ್ಧ ಸಾಲು ಸಾಲು ಗಂಭೀರ ಆರೋಪಗಳನ್ನು ಮಾಡಿದರು.

ನಳಿನ್‌ ಆಡಿಯೋ ಸತ್ಯ: ಕೋರ್​ ಕಮಿಟಿಯಲ್ಲಿ ನಳಿನ್ ಕುಮಾರ್ ಕಟೀಲು ಹೆಸರು ಸೇರಿಸಿದ್ದೇ ಸಂತೋಷ್​. ಕಟೀಲ್ ಅವರ ರಾಜಾಧ್ಯಕ್ಷ ಅವಧಿ ಮುಗಿದಿದ್ದರೂ ರಾಜ್ಯ ಬಿಜೆಪಿಗೆ ಅಧ್ಯಕ್ಷರ ನೇಮಕ ಆಗಿಲ್ಲ. ಬಿ.ಎಲ್​.ಸಂತೋಷ್​ ಹೇಳಿದಂತೆ ನಳಿನ್​ ಕುಮಾರ್​​ ಕೇಳುತ್ತಾರೆ. ಕಟೀಲು ಕೆಲ ದಿನಗಳ ಹಿಂದೆ ಮಾತಾಡಿದ್ದ ಆಡಿಯೋ ವೈರಲ್​ ಆಗಿತ್ತು. ಯಡಿಯೂರಪ್ಪನವರ ಕಾಲ ಮುಗಿತು, ಈಶ್ವರಪ್ಪ, ಶೆಟ್ಟರ್​​ ಮುಗಿಸುತ್ತೇವೆ ಎಂದಿದ್ದರು ಇದು ಇಂದು ಸತ್ಯವಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು