ಜೈನ ಮುನಿ ಹತ್ಯೆ ಕೇಸ್: ಆರೋಪಿ ಮಗನ ಕೃತ್ಯ ನೆನೆದು ಭಾವುಕರಾದ ತಂದೆ

ಬೆಂಗಳೂರು: ಬೆಳಗಾವಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಹಸನ್​ನ ತಂದೆ ಇಂದು ತನ್ನ ಮಗನ ಕೃತ್ಯ ನೆನೆದು ಭಾವುಕರಾಗಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ನಾರಾಯಣ ಮಾಳಿ ಮತ್ತು ಎರಡನೇ ಆರೋಪಿ ಹಸನಸಾಬ್ ದಲಾಯತ್ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಇಬ್ಬರನ್ನು ಬೆಳಗಾವಿ ಜೈಲಿಗೆ ಕರೆದೊಯ್ಯುತ್ತಿದ್ದಾರೆ. ಹೀಗಾಗಿ ಮಗ ಹಸನ್ ಭೇಟಿಗೆ ಬಂದಿದ್ದೇನೆ ಎಂದ ತಂದೆ ಮಕ್ಬೂಲ್ ಹೇಳಿದ್ದಾರೆ. ನಾನು ಬೇರೆಯವರ ಗದ್ದೆಯಲ್ಲಿ ಕಸ ತಗೆದು ಜೀವನ ಮಾಡುತ್ತೇನೆ. ಮಗ ಹೀಗೆ ಮಾಡಿದರೆ ಏನ್ ಮಾಡುವುದು ಹೇಳಿ, ದುಡಿದು ತಿನ್ನೋ ಮನುಷ್ಯ ನಾನು.

ನಾರಾಯಣ ಮಾಳಿ ಜೊತೆ ಹಸನ್​ಗೆ ಮೂರ್ನಾಲ್ಕು ವರ್ಷದ ಗೆಳೆತನವಿತ್ತು. ಹೊಲಕ್ಕೆ ಕೀಟನಾಶಕ ಸಿಂಪಡನೆ ಮಾಡಲು ಹೋಗುತ್ತಿದ್ದೇನೆ ಅಂತಾ ಅಂದು ರಾತ್ರಿ ಹೋಗಿದ್ದ. ಈ ವೇಳೆ ಅವರು  ವೇತನ ಕೊಡಲ್ಲ ಹೋಗಬೇಡ ಅಂತಾ ಹಸನ್​​ ಪತ್ನಿ ಹೇಳಿದ್ದಳು. ಆದರೆ ಈಕೆಯ ಮಾತನ್ನೂ ಲೆಕ್ಕಿಸದೆ ಹೋಗಿದ್ದ. ಮನೆಗೆ ವಾಪಸ್ ಬಂದಾಗಲೂ ನಮಗೆ ಏನೂ ಹೇಳಿರಲಿಲ್ಲ. ರಾತ್ರಿ 10 ಗಂಟೆಗೆ ಪೊಲೀಸರು ಬಂದಾಗ ವಿಚಾರ ಗೊತ್ತಾಯಿತು  ಎಂದು ಭಾವುಕರಾದರು.

Ashitha S

Recent Posts

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

17 seconds ago

ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು !

ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

13 mins ago

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದ ಎಟಿಎಸ್

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ  ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

29 mins ago

ಮೇಲ್ಛಾವಣಿಗೆ ಬಿದ್ದು ಬದುಕುಳಿದ ಮಗು; ಆದರೆ ಟೀಕೆಯಿಂದ ಬೇಸತ್ತು ತಾಯಿ ಆತ್ಮಹತ್ಯೆ

ಕಳೆದ ಏಪ್ರಿಲ್​ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್​ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಮಗುವಿನ…

34 mins ago

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ: ಸಿಎಂ

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ,  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

44 mins ago

ಪಡೀಲಿನಲ್ಲಿ ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯಕ್ಕೆ ಅಮಾಯಕ ವ್ಯಕ್ತಿ ಬಲಿ !

ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ…

49 mins ago