ಬೆಂಗಳೂರು

ಬೆಂಗಳೂರಿನಿಂದ ಮಹಾರಾಷ್ಟ್ರ ಗಡಿವರೆಗೆ ಜನಜಾಗೃತಿ ಪಾದಯಾತ್ರೆ

ಬೆಂಗಳೂರು: ಹರಿಯಾಣ, ಮದ್ಯಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲಿಯೂ ಮೀಸಲಾತಿ  ಜಾರಿಗೊಳಿ  ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ಬಜೆಟ್‌ ನಲ್ಲಿ ಒಂದು ಸಾವಿರ ಕೋಟಿ ರೂಪಾಯಿ ಅನುದಾನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳೊಂದಿಗೆ ಬೆಂಗಳೂರಿನಿಂದ ಮಹಾರಾಷ್ಟ್ರ  ಗಡಿವರೆಗೆ ಜನಜಾಗೃತಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು  ಎಸ್.ಸಿ, ಎಸ್.ಟಿ ಅಲೆಮಾರಿ ವಿಮುಕ್ತ ಬುಡಕಟ್ಟು ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಆದರ್ಶ್‌ ಎಲ್ಲಪ್ಪ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಮುಖ್ಯವಾಹಿನಿಯಿಂದ ದೂರ ಉಳಿದಿರುವ 74 ಅಲೆಮಾರಿ, ಅರೆ ಅಲೆಮಾರಿ   ಹಾಗೂ ವಿಮುಕ್ತ ಬುಟಕಟ್ಟು ಸಮುದಾಯಗಳನ್ನು ಗುರುತಿಸಿ ಅವರ ಅಭಿವೃದ್ಧಿಗಾಗಿ 2016ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಡೀ ದೇಶದಲ್ಲೆ ಪ್ರಥಮ ಭಾರಿಗೆ 120 ಕೋಟಿ ವಿಶೇಷ ಪ್ಯಾಕೇಜ್ ನೀಡಿ ಎಸ್ಸಿ, ಎಸ್ಟಿ ಅಲೆಮಾರಿಗಳ ಅಭಿವೃದ್ಧಿಗಾಗಿ ಕೋಶ ರಚನೆ ಮಾಡಿದರು. ಆದರೆ ಈ ಕೋಶದ  ಉದ್ದೇಶ ಸಾಕಾರಗೊಳ್ಳುತ್ತಿಲ್ಲ. ಮತ್ತೆ ಅಧಿಕಾರಕ್ಕೆ ಬಂದ ನಂತರ  ಸಿದ್ದರಾಮಯ್ಯ ಅವರು ನಮ್ಮ ಸಮಸ್ಯೆಗಳ ಈಡೇರಿಕೆಗಾಗಿ ಎರಡು ಬಾರಿ ಸಭೆ ನಡೆಸಿದರು. ಆದರೆ ಈ ವರೆಗೆ ಒಂದು ಪೈಸೆ ಸಹ ಅನುದಾನ ಬಿಡುಗಡೆಯಾಗದ ಕಾರಣ ಅಲೆಮಾರಿಗಳ ಕನಸುಗಳು ಕನಸಾಗಿಯೇ ಉಳಿದಿವೆ ಎಂದ ಎಂದರು.

ಕಾರ್ಯಾಧ್ಯಕ್ಷರು ವೆಂಕಟೇಶ್ ದೊರ, ಮಹಿಳಾ ಘಟಕದ ಅಧ್ಯಕ್ಷರಾದ ಪಲ್ಲವಿ ‌ಜಿ ಅವರು ಮಾತನಾಡಿ, ನೆಲೆ ಇಲ್ಲದ  ಅಲೆಮಾರಿಗಳಿಗೆ ಸಾಮೂಹಿಕ ನೀರಾವರಿ ವ್ಯವಸ್ಥೆ ಕಲ್ಪಿಸಿ  ಭೂ ಒಡೆತನ ಯೋಜನೆ ಅಡಿ ಭೂಮಿ ಹಂಚಿಕೆ ನೆಲೆ ನಿಲ್ಲಲು ಕ್ರಮಕೈಗೊಂಡು ಸಾಮಾಜಿಕವಾಗಿ ಮುನ್ನೆಲೆಗೆ ಬರಲು ಸಾಧ್ಯ. ಜಾತಿ ಪ್ರಮಾಣ ಪತ್ರಗಳ ಸಮಸ್ಯೆ ನಿವಾರಿಸುವ ಜೊತೆಗೆ ಸಮುದಾಯದ ಸಾಸ್ಕೃತಿಕ ಕಲಾ ಪರಂಪರೆ ರಕ್ಷಣೆಗಾಗಿ “ಶಾಶ್ವತ ಅಲೆಮಾರಿ ಆಯೋಗ” ರಚನೆ ಮಾಡಬೇಕೆಂದು ಆಗ್ರಹಿಸಿದರು.

ಎಕೆಎಂಎಸ್ ರಾಜ್ಯಾಧ್ಯಕ್ಷರಾದ  ಶಿವಾನಂದ ಭಜಂತ್ರಿ ಮಾತನಾಡಿ, ಸೂರಿಲ್ಲದವರಿಗೆ ಕನಿಷ್ಠ ಐದು ಲಕ್ಷ ರೂ ವೆಚ್ಚದಲ್ಲಿ ಮನೆ  ನಿರ್ಮಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು. ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ಬಜೆಟ್‌ ನಲ್ಲಿ ಒಂದು ಸಾವಿರ ಕೋಟಿ ರೂಪಾಯಿ ಅನುದಾನ ನೀಡಬೇಕು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ  ಖಜಾಂಚಿ ಬಸವರಾಜು ನಾರಯಣಕರ, ರಾಜ್ಯ ಜಂಟಿ ಕಾರ್ಯದರ್ಶಿ ಆನಂದ್ ಕುಮಾರ್ ಏಕಲವ್ಯ  ಮತ್ತಿತರರು ಭಾಗವಹಿಸಿದ್ದರು.

Ashika S

Recent Posts

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

10 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

35 mins ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

49 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

1 hour ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

1 hour ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

2 hours ago