ಬೆಂಗಳೂರು: ಇಂದಿನಿಂದ ನಡೆಯುವ ವಿಪಕ್ಷಗಳ ಸಭೆಗೆ ಕಾಂಗ್ರೆಸ್, ಪಿಡಿಪಿ, ಆಪ್, ಟಿಎಂಸಿ ಸೇರಿದಂತೆ ಹಲವು ಪಕ್ಷಗಳ ನಾಯಕರು ಬೆಂಗಳೂರಿಗೆ ಬಂದಿಳಿದ್ದಾರೆ. ಸೋನಿಯಾ, ರಾಹುಲ್ ಅವರನ್ನು ಬರಮಾಡಿಕೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, “ದೇಶದ ಆರ್ಥಿಕತೆಯನ್ನು ಹಾಳು ಮಾಡಿದ್ದು ನರೇಂದ್ರ ಮೋದಿಯೇ ಹೊರತು ವಿರೋಧ ಪಕ್ಷಗಳಲ್ಲ. ಎಲ್ಲಾ ವಿರೋಧ ಪಕ್ಷಗಳು ಒಗ್ಗೂಡುತ್ತಿವೆ’ ಎಂದು ಹೇಳಿದ್ದಾರೆ.
ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸೋನಿಯಾ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಸೇರಿದಂತೆ ಹಲವು ನಾಯಕರು ಹೂಗುಚ್ಚ ನೀಡಿ ಸ್ವಾಗತಿಸಿದರು. ತಾಜ್ ವೆಸ್ಟ್ ಎಂಡ್ ನಲ್ಲಿ ಈ ಸಭೆ ನಡೆಯಲಿದ್ದು, 26 ವಿಷಕ್ಷಗಳ ನಾಯಕರು ಭಾಗವಹಿಸಲಿದ್ದಾರೆ.