ಬೆಂಗಳೂರು:ನ್ಯಾ. ಸದಾಶಿವ ಆಯೋಗದ ವರದಿ ತಿರಸ್ಕರಿಸಲು ಹೋರಾಟ

ಬೆಂಗಳೂರು: ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರದ ಮೊದಲ ಪರಿಶಿಷ್ಟ ಜಾತಿ ಮೀಸಲಾತಿ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಅಲೆಮಾರಿ ಕೊರಮ ಕೊರಚ ಜಾತಿಗಳ ಮೀಸಲಾತಿ ರಕ್ಷಣೆಗೆ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಮಾರಕವಾಗಿದ್ದು, ಅವಾಸ್ತವಿಕ, ಅವೈಜ್ಞಾನಿಕ, ಅಂವಿಧಾನಿಕ ವರದಿಯನ್ನೇ ತಿರಸ್ಕರಿಸುವಂತೆ ಭಾರೀ ಕೂಗು ಕೇಳಿ ಬಂದಿದ್ದು, ಜ.10ರಂದು ಬೆಂಗಳೂರಿನ ಕೆ.ಆರ್.ಎಸ್ ನಿಲ್ಧಾಣದಿಂದ ಬೃಹತ್ ಜಾಥಾ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿರುವುದಾಗಿ ಅಖಿಲ ಕರ್ನಾಟಕ ಕುಳುವ ಮಹಾಸಂಘ  (ಕೊರಮ- ಕೊರಚ- ಕೊರವ ಸಮುದಾಯಗಳ ಒಕ್ಕೂಟ) ದ ರಾಜ್ಯಾಧ್ಯಕ್ಷ ಶಿವಾನಂದ ಎಂ ಭಜಂತ್ರಿ ಹೇಳಿದ್ದಾರೆ.

ಕೊರಮ, ಕೊರಚ ಹಾಗೂ ಬೋವಿ ಮತ್ತು ಲಂಬಾಣಿ ಸಮುದಾಯಗಳು ಸ್ವಾತಂತ್ರ್ಯ ಪೂರ್ವದ ಮಿಲ್ಲರ್ ಆಯೋಗದ ವರದಿ, ಡಾ.ಬಿ.ಆರ್. ಅಂಬೇಡ್ಕರ್ ಸಿದ್ದಪಡಿಸಿದ ಪ್ರಥಮ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಮತ್ತು 1950 ರಲ್ಲಿ ಮೈಸೂರು ಆಡಳಿತದಲ್ಲಿ ಗುರುತಿಸಿ, ಆದಿದ್ರಾವಿಡ, ಆದಿ ಕರ್ನಾಟಕ, ಬಂಜಾರ ಅಥವಾ ಲಂಬಾಣಿ, ಭೋವಿ, ಕೊರಚ, ಕೊರಮ ಜಾತಿಗಳು ಪರಿಶಿಷ್ಟ ಜಾತಿಗೆ ಸೇರಿವೆ.

ಇತ್ತೀಚಿಗೆ ಸಾಮಾಜಿಕ, ಶೈಕ್ಷಣಿಕವಾಗಿ ಇನ್ನೂ ಕನಿಷ್ಟ ಅಭಿವೃದ್ದಿ ಹೊಂದದ ಈ ಅವಕಾಶವಂಚಿತರನ್ನು ಸ್ಪೃಶ್ಯರು ಮತ್ತು ಅಸ್ಪೃಶ್ಯರು ಎಂದು ಹೊಸ ವರ್ಗ ಸೃಷ್ಟಿ ಮಾಡಿ ಪರಿಶಿಷ್ಟರ ಪಟ್ಟಿಯಿಂದ ಹೊರಗಿಡಲು ಶಿಫಾರಸ್ಸು ಮಾಡುವ ಮೂಲಕ ನ್ಯಾ.ಸದಾಶಿವ ಆಯೋಗದ ವರದಿ  ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿರುವುದು ಸ್ಪಷ್ಟವಾಗಿದೆ. ಈ ಬಗ್ಗೆ ಸಾರ್ವಜನಿಕ ಚರ್ಚೆಗೆ ಅವಕಾಶ ನೀಡದೇ ಬಿಜೆಪಿ ಸರ್ಕಾರ ಏಕಪಕ್ಷೀಯವಾಗಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಪ್ರಯತ್ನದಲ್ಲಿ ತೊಡಗಿರುವುದು ಸರಿಯಲ್ಲ. ಪರಿಶಿಷ್ಟರಲ್ಲಿ ಒಳಮೀಸಲಿಗೆ ಕೇಂದ್ರ, ರಾಜ್ಯ ಸರ್ಕಾರ ಅಥವಾ ನ್ಯಾಯಾಲಯಕ್ಕಾಗಲೀ ಅವಕಾಶ ಇಲ್ಲ. ಆದರೇ ಈ ಕುರಿತು ರಾಜ್ಯ ಸರ್ಕಾರ ಸಚಿವ ಸಂಪುಟದ ಉಪಸಮಿತಿ ರಚಿಸಿದ್ದು, ಶೀಘ್ರ ಆಯೋಗದ ವರದಿ ಜಾರಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುವುದು ಕಾನೂನು ಸಚಿವರು ಹೇಳಿದ್ದು, ಇದನ್ನು ವಿರೋಧಿಸಿ ಬೃಹತ್ ಹೋರಾಟ ನಡೆಸುತ್ತಿರುವುದಾಗಿ ಹೇಳಿದರು.

ಸಂವಿಧಾನಕ್ಕೆ ತಿದ್ದುಪಡಿ ಮಾಡದೇ ವರದಿ ಜಾರಿಗೊಳಿಸಲು ಸಾಧ್ಯವಿಲ್ಲ. ಪರಿಶಿಷ್ಟರಲ್ಲಿ ಒಳವರ್ಗೀಕರಣ ಮಾಡುವಂತೆ ಶಿಫಾರಸ್ಸು  ಮಾಡಿರುವುದು ಬಾಬಾ ಸಾಹೇಬರು ನೀಡಿರುವ ಮೀಸಲಾತಿಯ ಪರಿಕಲ್ಪನೆಗೆ ಧಕ್ಕೆಮಾಡಿದಂತಾಗುತ್ತದೆ. ಈ ಸಮುದಾಯಗಳು ನಾನಾ ಕಾರಣಕ್ಕೆ ದೇಶದ ಉದ್ದಗಲಕ್ಕೂ ಚದುರಿ ಹೋಗಿವೆ. ಅವಮಾನ, ಅಸಮಾನತೆ, ತಾರತಮ್ಯ ಹಾಗೂ ಸಾಮಾಜಿಕ ಕಳಂಕಕ್ಕೆ ಗುರಿಯಾಗಿ ಮುಖ್ಯವಾಹಿನಿಗೆ ಬರಲಾಗದೇ ಅಲೆಮಾರಿ ಜಾತಿಗಳಾಗಿಯೇ ಉಳಿದಿವೆ.

ಇಂತಹ ಪರಿಸ್ಥಿತಿಯಲ್ಲಿ ಒಂದು ವರ್ಗವನ್ನು ಓಲೈಕೆ ಮಾಡಲು ಮೀಸಲಾತಿಯ ಕನಿಷ್ಟ ಸವಲತ್ತು ಪಡೆಯದ ಈ ಪರಿಶಿಷ್ಟ ಜಾತಿ ಅಲೆಮಾರಿ  ಸಮುದಾಯಗಳ ಅಭಿವೃದ್ದಿಗೆ ಮಾರಕವಾಗಿರುವ ವರದಿಯನ್ನು ಸರ್ಕಾರ ತಿರಸ್ಕಾರ ಮಾಡದೇ ಇದ್ದಲ್ಲಿ ಇಡೀ ದೇಶಾದ್ಯಾಂತ ಅನ್ಯಾಯಕ್ಕೊಳಗಾಗುವ ಸಮುದಾಯಗಳನ್ನು ಒಂದೇ ವೇದಿಕೆಗೆ ತಂದು ರಾಷ್ಟ್ರವ್ಯಾಪಿ  ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

Ashika S

Recent Posts

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

7 mins ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

14 mins ago

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

27 mins ago

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…

30 mins ago

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

41 mins ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

48 mins ago