News Karnataka Kannada
Friday, May 03 2024
ಬೆಂಗಳೂರು

ಕರ್ನಾಟಕದ ಜಾತಿ ಗಣತಿ ಅಂಕಿ-ಅಂಶ ರಿಲೀಸ್ ಬಗ್ಗೆ ಸಿಎಂ ಮಹತ್ವದ ಹೇಳಿಕೆ

Karnataka CM makes crucial statement on release of caste census data
Photo Credit : News Kannada

ಬೆಂಗಳೂರು: ಬಿಹಾರ ಸರ್ಕಾರ ಜಾತಿಗಣತಿಯನ್ನು ಸಾರ್ವಜನಿಕಗೊಳಿಸಿದ ಬೆನ್ನಲ್ಲೇ ಕರ್ನಾಟಕದಲ್ಲೂ ಬಿಡುಗಡೆ ಮಾಡುವಂತೆ ಒತ್ತಡ ಕೇಳಿಬರುತ್ತಿವೆ. ಹಲವು ರಾಜಕೀಯ ಮುಖಂಡರು 2015ರಲ್ಲಿ ನಡೆದ ಜನಗಣತಿಯ ಅಂಕಿ-ಅಂಶವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ.

ಇದೇ ವಿಚಾರಕ್ಕೆ ಮಾಧ್ಯಮಗಳ ಜೊತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ನವೆಂಬರ್ ತಿಂಗಳಿನಲ್ಲಿ ಜಾತಿ ಗಣತಿ ವರದಿ ನನ್ನ ಕೈ ಸೇರಬಹುದು. ಆ ನಂತರ ಪರಿಶೀಲಿಸಿ ತೀರ್ಮಾನ ಮಾಡುತ್ತೇವೆ. ಸಮಿತಿ ಅಧ್ಯಕ್ಷರು ಬದಲಾಗಿದ್ದಾರೆ, ಹೀಗಾಗಿ ಅವರು ನವೆಂಬರ್​ನಲ್ಲಿ ಜಾತಿ ಗಣತಿ ವರದಿ ಕೊಡುತ್ತಾರೆ. ಜಾತಿ ಗಣತಿ ಸಮಾಜಕ್ಕೆ ಮಾರಕವಲ್ಲ. ಯಾವ ಸಮುದಾಯ ಎಷ್ಟಿದೆ ಎಂಬುವುದನ್ನು ಅಂಕಿ-ಅಂಶಗಳು ಸರ್ಕಾರಕ್ಕೆ ಬೇಕು ಎಂದು ಹೇಳಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲೇ 2015ರಲ್ಲಿ ಜಾತಿ ಗಣತಿ ನಡೆದಿತ್ತು. ಹಿಂದುಳಿದ ವರ್ಗಗಳ ಆಯೋಗ ರಾಜ್ಯಾದ್ಯಂತ ಮನೆ ಮನೆಗೆ ತೆರಳಿ ಗಣತಿ ನಡೆಸಿತ್ತು. ಆದ್ರೆ, ಆಯೋಗ ತನ್ನ ವರದಿಯನ್ನ ಇನ್ನೂ ಸರ್ಕಾರಕ್ಕೆ ಸಲ್ಲಿಕೆ ಮಾಡಿಲ್ಲ. ಈಗ ಮತ್ತೆ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದೆ. ಹೀಗಾಗಿ ಈ ಬಾರಿ ಕರ್ನಾಟಕದ ಜಾತಿ ಗಣತಿ ಅಂಕಿ ಅಂಶ ಹೊರ ಬರುವುದು ಪಕ್ಕಾ ಎನ್ನಲಾಗ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು