ಬೆಂಗಳೂರು: ಬೆಳಗಾವಿಯಲ್ಲಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಸಿಎಂ ಇಂದು (ಜುಲೈ 19) ಸದನಕ್ಕೆ ಮಾಹಿತಿ ನೀಡಿದ ಅವರು, ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯಲ್ಲಿ ಜೈನಮುನಿ ಹತ್ಯೆ ಪ್ರಕರಣ ಅತೀ ಸೂಕ್ಷ್ಮವಾಗಿರುವುದರಿಂದ ಸಿಐಡಿಗೆ ಹಸ್ತಾಂತರ ಮಾಡಲಾಗುವುದು ಎಂದು ಸ್ಪಷ್ಟಡಿಸಿದರು.
ಜೈನ ಮುನಿಯನ್ನು ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆದರೆ ಹತ್ಯೆ ಪ್ರಕರಣದಲ್ಲಿ ಬೇರೆ ಆಯಾಮ ಇದೆ. ಈ ಹಿನ್ನೆಲೆಯಲ್ಲಿ ಇದನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿತ್ತು. ಆದರೆ ಇದೀಗ ಸರ್ಕಾರ ಸಿಐಡಿ ತನಿಖೆಗೆ ನೀಡಲು ನಿರ್ಧಾರ ಮಾಡಿದೆ ಎಂದು ತಿಳಿಸಿದರು.