News Karnataka Kannada
Monday, May 13 2024
ಬೆಂಗಳೂರು

ಗೃಹಲಕ್ಷ್ಮಿ ಯೋಜನೆಗೆ ಇಂದಿನಿಂದ ಅರ್ಜಿಸಲ್ಲಿಕೆ ಅರಂಭ

gruha-lakshmi
Photo Credit : News Kannada

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಇಂದಿನಿಂದ ಅರ್ಜಿಸಲ್ಲಿಕೆ ಅರಂಭವಾಗಿದೆ. ಅರ್ಜಿ ನೋಂದಣಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ, ಮೊಬೈಲ್‌ ನಂಬರ್ ಅಗತ್ಯವಿದ್ದು, ಬೆಂಗಳೂರು ಇನ್, ಗ್ರಾಮ ಒನ್, ಕರ್ನಾಟಕ ಒನ್, ಬಾಪುಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.‌

ಇಂದಿನಿಂದ ಬೆಂಗಳೂರು ಒನ್ ಕೇಂದ್ರಗಳಿಗೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸಾಧ್ಯತೆ ಇದೆ. ಕೇಂದ್ರಗಳಲ್ಲಿ ನೂಕು ನುಗ್ಗಲಾಗುವ ಸಾಧ್ಯತೆ ಇದೆ.‌ ಸದ್ಯ 1.28 ಕೋಟಿಯಷ್ಟು ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಬ್ಯಾಂಕ್ ಅಕೌಂಟ್ ಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಲಿಂಕ್ ಆಗಿರಬೇಕು.

‘ಗೃಹಲಕ್ಷ್ಮೀ’ ಯೋಜನೆಯಡಿ ಮನೆ ಒಡತಿಗೆ ಪ್ರತೀ ತಿಂಗಳು 2 ಸಾವಿರ ರೂ. ಹಣ ಬರಲಿದೆ. ಇದೇ ಯೋಜನೆ ಅರ್ಜಿ ಸಲ್ಲಿಕೆ ಎಸ್‌ಎಂಎಸ್‌ ಮೂಲಕ ಆರಂಭವಾಗಲಿದೆ. ಮೊದಲಿಗೆ ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು 8147500500 ಸಂಖ್ಯೆಗೆ SMS ಮಾಡ್ಬೇಕು. ಹೀಗೆ ಎಸ್‌ಎಂಎಸ್‌ ಮಾಡುತ್ತಿದ್ದಂತೆಯೇ ಎರಡೇ ಸೆಕೆಂಡ್‌ನಲ್ಲೇ ಇಲಾಖೆಯಿಂದ ನಿಮಗೆ ಮೇಸೇಜ್‌ ಬರಲಿದೆ. ಅದರಲ್ಲಿ ಸ್ಥಳ, ಗೊತ್ತುಪಡಿಸಿದ ದಿನಾಂಕ, ಸಮಯ ಸಂದೇಶ ಬರಲಿದೆ. ಅದೇ ದಿನ, ಅದೇ ಸಮಯಕ್ಕೆ ಹೋಗಿ ಅರ್ಜಿ ಸಲ್ಲಿಸಬಹುದು. ಇನ್ನು ಅರ್ಜಿ ಸಲ್ಲಿಸಲು ಮನೆ ಒಡತಿ ಹೆಸರು ಇರೋ ಪಡಿತರ ಕಾರ್ಡ್‌ ಕಡ್ಡಾಯವಾಗಿದ್ದು, ಇದರ ಜತೆ ಮನೆ ಯಜಮಾನಿಯ ಆಧಾರ್‌ ಕಾರ್ಡ್‌ ಹಾಗೂ ಮೊಬೈಲ್‌ ಕೂಡಾ ತೆಗೆದುಕೊಂಡು ಹೋಗಬೇಕು. ಇನ್ನೊಂದು ವಿಚಾರ ಎಂದರೆ ಇಲ್ಲಿ ಮನೆ ಒಡತಿಯ ಪತಿಯ ಆಧಾರ್‌ಕಾರ್ಡ್‌ ಕೂಡಾ ಕಡ್ಡಾಯವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು