News Karnataka Kannada
Friday, May 03 2024
ಬೆಂಗಳೂರು

ಅಕ್ರಮ ಹಣ: ಪಿಣರಾಯಿ ವಿಜಯನ್ ಪುತ್ರಿ ವೀಣಾ ಅವರ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

ಅಕ್ರಮ ಹಣ ಸಂದಾಯ ಪ್ರಕರಣ ಸಂಬಂಧ ತನಿಖಾ ಸಂಸ್ಥೆ ಎಸ್​​ಎಫ್​ಐಎ ತನಿಖೆ ವಿರುದ್ಧ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್  ಅವರ ಪುತ್ರಿ ವೀಣಾ ಟಿ ಅವರಿಗೆ ತೀವ್ರ ಹಿನ್ನಡೆಯಾಗಿದೆ.
Photo Credit : News Kannada

ಬೆಂಗಳೂರು: ಅಕ್ರಮ ಹಣ ಸಂದಾಯ ಪ್ರಕರಣ ಸಂಬಂಧ ತನಿಖಾ ಸಂಸ್ಥೆ ಎಸ್​​ಎಫ್​ಐಎ ತನಿಖೆ ವಿರುದ್ಧ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್  ಅವರ ಪುತ್ರಿ ವೀಣಾ ಟಿ ಅವರಿಗೆ ತೀವ್ರ ಹಿನ್ನಡೆಯಾಗಿದೆ.

ವೀಣಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ವಜಾಗೊಳಿಸಿದೆ. ಅದರಂತೆ ಎಸ್​​ಎಫ್​​ಐಎ ತನಿಖೆ ಮುಂದುವರಿಸಲಿದೆ.

ಯಾವುದೇ ಸೇವೆ ನೀಡದಿದ್ದರೂ ಕೊಚ್ಚಿನ್ ಮಿನರಲ್ಸ್‌ನಿಂದ ಕೇರಳದ ರಾಜಕೀಯ ವ್ಯಕ್ತಿಗಳಿಗೆ 135 ಕೋಟಿ ರೂಪಾಯಿ ನೀಡಲಾಗಿದೆ ಎಂಬ ಅಂಶ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿ ವೇಳೆ ತಿಳಿದು ಬಂದಿತ್ತು. ಅಲ್ಲದೆ, ಈ ಹಣದ ಪೈಕಿ 1.72 ಕೋಟಿ ರೂಪಾಯಿಗಳನ್ನು ಟಿ.ವೀಣಾ ನಿರ್ದೇಶಕಿಯಾಗಿರುವ ಕರ್ನಾಟಕದಲ್ಲಿರುವ ಎಕ್ಸಲಾಜಿಕ್ ಸಲ್ಯೂಷನ್ಸ್ ಪ್ರೈ.ಲಿ.ಗೆ ವರ್ಗಾವಣೆಯಾಗಿರುವುದು ಕಂಡುಬಂದಿತ್ತು.

ಯಾವುದೇ ಸೇವೆ ನೀಡದಿದ್ದರೂ ಹಣ ಸಂದಾಯ ಮಾಡಿದ ಪ್ರಕರಣ ಸಂಬಂಧ ಐಟಿ ಅಧಿಕಾರಿಗಳು ಎಸ್ಎಫ್ಐಒ ಗಮನಕ್ಕೆ ತಂದಿತ್ತು. ಅದರಂತೆ ಪ್ರಕರಣ ದಾಖಲಿಸಿಕೊಂಡ ಎಸ್ಎಫ್ಐಒ ತನಿಖೆ ನಡೆಸುತ್ತಿದೆ. ಇದರ ವಿರುದ್ಧ ವೀಣಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು