ಬೆಂಗಳೂರು: 14ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯನವರು ‘ತೆಂಗು, ಅಡಕೆ, ದ್ರಾಕ್ಷಿ, ದಾಳಿಂಬೆ ಬೆಳೆ ಸಂಸ್ಕರಣೆಗೆ 10 ಕೋಟಿ ವೆಚ್ಚದಲ್ಲಿ ಯೋಜನೆ ಜಾರಿ, ಚಿಕ್ಕಮಗಳೂರು ಕಾಫಿ, ಪ್ರವಾಸೋದ್ಯಮ ಉತ್ತೇಜನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನು ಮೊದಲನೇ ಹಂತದಲ್ಲಿ ಬಿಬಿಎಂಪಿ ಹಾಗೂ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್ ಪುನರಾರಂಭ ಮಾಡಲು ನಿರ್ಧಾರ ಮಾಡಲಾಗಿದೆ. ಎರಡನೇ ಹಂತದಲ್ಲಿ ಎಲ್ಲಾ ಹೊಸ ಪಟ್ಟಣ ಹಾಗೂ ಬಿಬಿಎಂಪಿ ಹೊಸ ವಾರ್ಡ್ ಗಳಲ್ಲಿ ಕ್ಯಾಂಟೀನ್ ಆರಂಭ ಆಗಲಿದೆ. ಪ್ರಸಕ್ತ ಸಾಲಿನಲ್ಲಿ ಇಂದಿರಾ ಕ್ಯಾಂಟೀನ್ ದುರಸ್ತಿ ನವೀಕರಣ ಹಾಗೂ ನಿರ್ವಹಣೆಗೆ 100 ಕೋಟಿ ಮೀಸಲಿಡಲಾಗಿದೆ ಎಂದಿದ್ದಾರೆ.