ಬೆಂಗಳೂರು: ರಾಜ್ಯದ ನೂತನ ಬಿಜೆಪಿ ಪದಾಧಿಕಾರಿಗಳ ಪಟ್ಟಿಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯ ಬಿಜೆಪಿಯನೂತನ ಪದಾಧಿಕಾರಿಗಳ ನೇಮಕವನ್ನು ಕೇಂದ್ರ ನಾಯಕರ ಜತೆಗೆ ಚರ್ಚೆ ಮಾಡಿ ನಿರ್ಧಾರ ಮಾಡಲಾಗಿದೆ. ಪಕ್ಷ ಸಂಘಟನೆಗೆ ಸಮರ್ಥ ನಾಯಕರನ್ನು ನಾನು ಆಯ್ಕೆ ಮಾಡಿಕೊಂಡಿದ್ದೇನೆ. ನನ್ನ ಆಯ್ಕೆಗೆ ಹೈಕಮಾಂಡ್ ಅಸ್ತು ಎಂದಿದೆ. ಇನ್ನು ಮೂರ್ನಾಲ್ಕು ದಿನ ಕಾದು ನೋಡಿ, ಬೇರೆ ಬೇರೆ ಪಟ್ಟಿ ರಿಲೀಸ್ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ವೈ. ವಿಜಯೇಂದ್ರ, ಪಕ್ಷ ಸಂಘಟನೆ ದೃಷ್ಟಿಯನ್ನಿಟ್ಟುಕೊಂಡು ಸಮರ್ಥ ನಾಯಕರ ಟೀಂ ಕಟ್ಟಲಾಗಿದೆ ಎಂದು ಸ್ಪಷ್ಟಪಡಿಸಿದರು.
ನಿಮ್ಮ ವಿರುದ್ಧ ಮಾತನಾಡುವ ನಾಯಕರನ್ನು ದೂರ ಇಟ್ಟಿದ್ದೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಬಿ.ವೈ. ವಿಜಯೇಂದ್ರ, ಇನ್ನು ಮೂರ್ನಾಲ್ಕು ದಿನದಲ್ಲಿ ಬೇರೆ ಬೇರೆ ಪಟ್ಟಿ ರಿಲೀಸ್ ಆಗಲಿದ್ದು, ಕಾದು ನೋಡಿ ಎಂದು ಹೇಳಿದ್ದಾರೆ.