ಬೆಂಗಳೂರು: ಬೆಂಗಳೂರಿನ ರಸ್ತೆಗುಂಡಿಗಳನ್ನು ಮುಚ್ಚದೇ ಇರೋದಕ್ಕೆ ಉದ್ಯಮಿ ಮೋಹನ್ ದಾಸ್ ಪೈ ಹಾಗೂ ಕಿರಣ್ ಮಜುಂದಾರ್ ಶಾ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಗುಂಡಿ ಬಿದ್ದ ರಸ್ತೆಗಳ ರೀಲ್ಸ್ ವಿಡಿಯೋವನ್ನು ಟ್ವೀಟ್ ಮಾಡಿದ ಇಬ್ಬರು ದೈತ್ಯ ಉದ್ಯಮಿಗಳು ಸರ್ಕಾರ ಹಾಗೂ ಜನಪ್ರತಿನಿಧಿಗಳ ಮೇಲೆ ಅಸಮಾಧಾನ ಹೊರ ಹಾಕಿದ್ದಾರೆ.
ಗುಂಡಿ ಬಿದ್ದ ರಸ್ತೆಯ ವಿಡಿಯೋ ಟ್ವೀಟ್ ಮಾಡಿದ ಮೋಹನ್ ದಾಸ್ ಪೈ ಅವರು, “ಇದು ಕರ್ನಾಟಕದ ದುಃಖದ ಕಥೆ. ಕಳೆದ 20 ವರ್ಷಗಳಲ್ಲಿ ಭ್ರಷ್ಟಾಚಾರ ಮುಂದುವರಿದ ಪರಿಣಾಮ ಇದು. 21ನೇ ಶತಮಾನದಲ್ಲಿ ಕರ್ನಾಟಕವು ಗುಂಡಿ ಮುಕ್ತ ರಸ್ತೆಗಳನ್ನು ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ? ದೊಡ್ಡ ನಾಚಿಕೆಗೇಡಿನ ಸಂಗತಿ” ಎಂದು ಸಿಎಂಗೆ ಈ ವಿಡಿಯೋವನ್ನು ಮೋಹನ್ ದಾಸ್ ಪೈ ಅವರು ಟ್ಯಾಗ್ ಮಾಡಿದ್ದಾರೆ.
ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಸರ್ಜಾಪುರ ರಸ್ತೆಯ ವಿಡಿಯೋ ಟ್ವೀಟ್ ಮಾಡಿ ತಮ್ಮ ಬೇಸರ ಹೊರ ಹಾಕಿದ್ದಾರೆ. ಕಿರಣ್ ಮಜುಂದಾರ್ ಶಾ ಅವರ ಟ್ವೀಟ್ ಅನ್ನು ಮೋಹನ್ ದಾಸ್ ಪೈ ಅವರು ರೀಟ್ವೀಟ್ ಮಾಡಿದ್ದಾರೆ. ಇಬ್ಬರು ದೈತ್ಯ ಉದ್ಯಮಿಗಳ ಟ್ವೀಟ್ ಹಾಗೂ ರೀಲ್ಸ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
So frustratingly shameful. https://t.co/L35aH7yTCx
— Kiran Mazumdar-Shaw (@kiranshaw) August 18, 2024

