ಬೆಂಗಳೂರು ; ಕೋಲಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮುಳಬಾಗಿಲು ಹಾಗೂ ಬೇತಮಂಗಲದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ಒಂದೇ ನಂಬರ್ ಬಳಸಿಕೊಂಡು ತೆರಿಗೆ ವಂಚಿಸಿ ಸಂಚರಿಸುತ್ತಿದ್ದ ನಾಲ್ಕು ಬಸ್ಗಳನ್ನು ವಶಪಡಿಸಿಕೊಂಡಿದ್ದಾರೆ. ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್, ಜಂಟಿ ಆಯುಕ್ತೆ ಓಂಕಾರೇಶ್ವರಿ ನೇತೃತ್ವದಲ್ಲಿ ಕೋಲಾರ ಪ್ರಾದೇಶಿಕ ಸಾರಿಗೆ ಕಚೇರಿಯ ಮೋಟಾರು ವಾಹನ ನಿರೀಕ್ಷಕರಾದ ತಿಪ್ಪೇಸ್ವಾಮಿ ಸಿ., ಸುರೇಶ್ ಜಿ.ಎನ್., ಸುಧೀರ್ ಬಾಬು ಟಿ ಅವರನ್ನೊಳಗೊಂಡ ತಂಡ ಸುಮಾರು 10 ಲಕ್ಷ ತೆರಿಗೆ ವಂಚಿಸಿ ಒಂದೇ ನಂಬರ್ ಬಳಸಿಕೊಂಡು ಸಂಚರಿಸುತ್ತಿದ್ದ ನಾಲ್ಕು ಬಸ್ಗಳನ್ನು ವಶಪಡಿಸಿಕೊಂಡಿದೆ. ಈ ಸಂಬಂಧ ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಒಂದೇ ನಂಬರಿನ ನಾಲ್ಕು ಬಸ್ ಓಡಿಸಿ ತೆರಿಗೆ ವಂಚಿಸುತಿದ್ದ 4 ಬಸ್ ಗಳ ವಶ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.