ಕೋಲಾರ: ಈ ಮೇಕೆದಾಟು ಪಾದಯಾತ್ರೆಯ ಭದ್ರತೆಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಹೀಗೆ ನಿಯೋಜನೆಗೊಂಡಂತ 25 ಪೊಲೀಸರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ.
ಈ ಬಗ್ಗೆ ಮಾಹಿತಿ ನೀಡಿರುವಂತ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೇವರಾಜ್ ಅವರು, ಜಿಲ್ಲೆಯಿಂದ ಮೇಕೆದಾಟು ಪಾದಯಾತ್ರೆಯ ಭದ್ರತೆಗಾಗಿ ನಿಯೋಜನೆಗೊಂಡಿದ್ದಂತ 25 ಪೊಲೀಸರಿಗೆ ಕೊರೋನಾ ಪಾಸಿಟಿವ್ ಎಂಬುದು ಪರೀಕ್ಷೆಯಲ್ಲಿ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.
ಅಂದಹಾಗೇ ಕಾಂಗ್ರೆಸ್ ಪಕ್ಷದಿಂದ ನಡೆದಂತ ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದಂತ ರಾಜ್ಯ ಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಹೆಚ್ ಎಂ ರೇವಣ್ಣ ಸೇರಿದಂತೆ ಅನೇಕರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು.
ಈ ಬಳಿಕ ಹೈಕೋರ್ಟ್ ನಲ್ಲಿ ಕಾಂಗ್ರೆಸ್ ಪಾದಯಾತ್ರೆ ಸಂಬಂಧ ಸಲ್ಲಿಕೆಯಾಗಿದ್ದಂತ ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡು ನ್ಯಾಯಪೀಠವು ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಚಾಟಿ ಬೀಸಿತ್ತು. ಹೀಗಾಗಿ ಐದೇ ದಿನಕ್ಕೆ ಪಾದಯಾತ್ರೆ ಮೊಟಕುಗೊಳಿಸಲಾಗಿತ್ತು. ಈ ಪಾದಯಾತ್ರೆಯ ಭದ್ರತೆಗಾಗಿ ಕೋಲಾರ ಜಿಲ್ಲೆಯಿಂದ ನೇಮಕಗೊಂಡಿದ್ದಂತ 25 ಪೊಲೀಸರಿಗೆ ಈಗ ಕೋವಿಡ್ ದೃಢಪಟ್ಟಿದೆ.