News Karnataka Kannada
Friday, May 10 2024
ಕೋಲಾರ

ಶ್ರೀರಾಮಸೇನೆ ದತ್ತ ಮಾಲೆ ಧರಿಸಿ ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

Kavur
Photo Credit :

ಕೋಲಾರ: ಕೋಲಾರದ ವಿಶಾಲ್ ಮಾರ್ಟ್ ಎದುರು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಈ ಸಂದರ್ಭದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಕೆಲವರು ಅಲ್ಲೇ ಗುಂಫುಗೂಡಿದ್ದರು. ಇದೇ ಮಾರ್ಗವಾಗಿ ದತ್ತಮಾಲಾಧಾರಿಗಳು ಘೋಷಣೆ ಕೂಗುತ್ತ ಬಸ್ ಲ್ಲಿ ತೆರಳುವಾಗ ಅಲ್ಲಿದ್ದ ಗುಂಪು ಅಡ್ಡಗಟ್ಟಿ ಬಸ್ ಮೇಲೆ ಕಲ್ಲು ತೂರಿದೆ ಎನ್ನಲಾಗಿದೆ.

ಶ್ರೀರಾಮಸೇನೆ ಕಾರ್ಯಕರ್ತರು ದತ್ತ ಮಾಲೆ ಧರಿಸಿ ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕೋಲಾರದ ಕ್ಲಾಕ್ ಟವರ್ ಬಳಿ ವಿಶಾಲ್ ಮಾರ್ಕೆಟ್ ಎದುರು ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ.

ರಾತ್ರಿ 11 ಗಂಟೆ ಸುಮಾರಿಗೆ ದತ್ತ ಮಾಲಾಧಾರಿಗಳು ಮಿನಿ ಬಸ್ ನಲ್ಲಿ ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ಕಲ್ಲು ತೂರಾಟ ನಡೆಸಲಾಗಿದೆ.

ಘಟನೆಯಲ್ಲಿ ಬಸ್ ನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ದತ್ತಮಾಲಾಧಾರಿಗಳು ಮತ್ತು ಶ್ರೀರಾಮಸೇನೆ ಕಾರ್ಯಕರ್ತರು ಕೋಲಾರ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಕೋಲಾರ ನಗರದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು