Categories: ಕೋಲಾರ

ಸೀರೆಯಲ್ಲಿ ಉಯ್ಯಾಲೆ ಆಡುತ್ತಿದ್ದಾಗ ಉಸಿರುಕಟ್ಟಿ ಬಾಲಕಿ ಸಾವು

ಕೋಲಾರ : ಸೀರೆಯಲ್ಲಿ  ಉಯ್ಯಾಲೆ ಆಡುತ್ತಿದ್ದಾಗ  ಬಾಲಕಿಯೋರ್ವಳು ಮೃತಪಟ್ಟ ದಾರುಣ  ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಪೆದ್ದೂರು ಗ್ರಾಮದಲ್ಲಿ ನಡೆದಿದೆ. ಉಯ್ಯಾಲೆ ಆಡುತ್ತಿದ್ ಇಬ್ಬರು ಹೆಣ್ಣು ಮಕ್ಕಳಲ್ಲಿ ಓರ್ವ ಬಾಲಕಿ ಸಾವನ್ನಪ್ಪಿದ್ದು, ಮತ್ತೋರ್ವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೆದ್ದೂರು ಗ್ರಾಮದ ಅಶೋಕರೆಡ್ಡಿ ಎಂಬುವವರ ಮಗಳಾದ ಮೇಘನಾ(12) ಸಾವನ್ನಪ್ಪಿದ್ದು, ಶ್ರೀನಿವಾಸಪುರ ತಾಲ್ಲೂಕಿನ ಯಮನೂರು ಗ್ರಾಮದ ದೇವಿಶ್ರೀ ಎಂಬ ಮತ್ತೋರ್ವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಾಲಕಿಯ ಸ್ಥಿತಿ ಗಂಭೀರವಾಗಿದೆ.
ಪೆದ್ದೂರು ಗ್ರಾಮದ ಮೃತ ಮೇಘನಾ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ಯಮನೂರು ಗ್ರಾಮದ ಸೋಮಪ್ಪ ಎಂಬುವವರ ಮಗಳಾದ ದೇವಿಶ್ರೀ ಪೆದ್ದೂರು ಗ್ರಾಮದ ತಮ್ಮ ತಾತ ಚಂಗಲರಾಯಪ್ಪ ಮತ್ತು ಅಜ್ಜಿ ಲಕ್ಷ್ಮಮ್ಮ ಮನೆಯಲ್ಲಿ ಇದ್ದುಕೊಂಡು ನಂಗಲಿ ಆರ್.ಎಂ.ಇಂಟರ್ ನ್ಯಾಷನಲ್ ಶಾಲೆಯಲ್ಲಿ ಆರನೆಯ ತರಗತಿ ಓದುತ್ತಿದ್ದರು.
ಶಾಲೆಗೆ ರಜೆ ಇದ್ದ ಕಾರಣ, ಮೇಘನಾ ಮತ್ತು ದೇವಶ್ರೀ ಮನೆಯ ಚಾವಣಿಯ ಕಬ್ಬಿಣದ ಕೊಂಡಿಗಳಿಗೆ ಎರಡು ಸೀರೆಗಳನ್ನು ಪಕ್ಕ ಪಕ್ಕದಲ್ಲಿ ಕಟ್ಟಿ ಉಯ್ಯಾಲೆಯಾಡುತ್ತಿದ್ದರು. ಈ ವೇಳೆ ಎರಡೂ ಸೀರೆಗಳು ಆಕಸ್ಮಿಕವಾಗಿ ಒಂದರಲ್ಲಿ ಒಂದು ಸುತ್ತಿಕೊಂಡಿದ್ದರಿಂದ ಒಂದು ಸೀರೆಯ ಉಯ್ಯಾಲೆಯಲ್ಲಿದ್ದ ಮೇಘನಾ ಕುತ್ತಿಗೆಗೆ ಗಟ್ಟಿಯಾಗಿ ಸುತ್ತಿಕೊಂಡು ಉಸಿರು ಕಟ್ಟಿ ಸಾವನ್ನಪ್ಪಿದ್ದಾರೆ.
ಮತ್ತೊಂದು ಸೀರೆಯಲ್ಲಿ ದೇವಿಶ್ರೀ ಕತ್ತಿಗೆ ಸೀರೆ ಸುತ್ತಿಕೊಂಡು ಕಿರುಚಾಡುತ್ತಿದ್ದಾಗ ಮನೆಯಲ್ಲಿದ್ದ ಅಜ್ಜಿ ಮತ್ತು ತಾತಾ ಬಂದು ಸೀರೆಯನ್ನು ಬಿಡಿಸಿದ್ದಾರೆ. ದೇವಿಶ್ರೀ ಉಸಿರಾಟದಲ್ಲಿ ತೊಂದರೆಯಾಗಿದ್ದು, ಕೋಲಾರ ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ಮೇಘನಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ನಂಗಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Raksha Deshpande

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

45 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

58 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

1 hour ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

1 hour ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago