ಕೋಲಾರ : ದತ್ತ ಮಾಲಾಧಾರಿಗಳ ಮೇಲಿನ ಕಲ್ಲು ತೂರಾಟ ಖಂಡಿಸಿ ಹಿಂದೂಪರ ಸಂಘಟನೆಗಳು ನಾಳೆ ಕೋಲಾರ ಬಂದ್ ಗೆ ಕರೆ ನೀಡಲಾಗಿದೆ.
ಕಳೆದ ಶನಿವಾರ ರಾತ್ರಿ ರಾಮ ಸೇನಾ ದತ್ತ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳ ಗುಂಪುವೊಂದು ಕಲ್ಲು ತೂರಾಟ ನಡೆಸಿತ್ತು.
ಹೀಗಾಗಿ ದತ್ತ ಮಾಲಾಧಾರಿಗಳ ಮೇಲಿನ ಕಲ್ಲು ತೂರಾಟ ಖಂಡಿಸಿ ನಾಳೆ ಹಿಂದೂಪರ ಸಂಘಟನೆಗಳ ಕೋಲಾರ ಬಂದ್ ಗೆ ಕರೆ ನೀಡಲಾಗಿದೆ.
ಕೋಲಾರ ಬಂದ್ ಗೆ ಕರೆ ನೀಡಲಾಗಿದ್ದು, ನಾಳೆ ಬಂದ್ ಹಿನ್ನೆಲೆ ಮಹಾತ್ಮ ಗಾಂಧಿ ವೃತ್ತದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ (Rally) ನಡೆಸಲಾಗುತ್ತದೆ ಎಂದು ಹಿಂದೂಪರ ಸಂಘಟನೆಗಳ ಒಕ್ಕೂಟ ಹೇಳಿದೆ.