ಕೋಲಾರ: ವರ್ಷಧಾರೆಯ ನಡುವೆ ಕೋಲಾರ ಎಪಿಎಂಸಿಯಲ್ಲಿ ಟೊಮ್ಯಾಟೊ ಆವಕ ತೀವ್ರ ಕುಸಿತ ಕಂಡಿದ್ದು, ಪರಿಣಾಮ ಟೊಮ್ಯಾಟೊ ದರ ಗಗನಕ್ಕೇರಿದೆ. ಒಂದು ತಿಂಗಳಿಂದ ತೇವಾಂಶ ಹೆಚ್ಚಾಗಿ ಟೊಮ್ಯಾಟೊ ಇನ್ನಿತರ ತರಕಾರಿಗಳಿಗೆ ರೋಗಬಾಧೆ ಹೆಚ್ಚಾಗಿ ಬೆಳೆ ನಷ್ಟವಾಗಿದೆ.
ಇಳುವರಿಯಕಲ್ಲೂ ತೀವ್ರ ಕುಸಿತ ಕಂಡುಬಂದಿದೆ. ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತರಕಾರಿ ಬೆಳೆ ಹಾನಿಗೀಡಾಗಿದೆ. ಜಿಟಿಜಿಟಿ ಮಳೆಗೆ ಇಳುವರಿ ಕಟಾವು ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೋಲಾರ ಎಪಿಎಂಸಿಗೆ ತರಕಾರಿಗಳ ಆವಕ ತೀರಾ ಕಡಿಮೆ ಆಗಿದೆ.
ಶುಕ್ರವಾರ ಕೋಲಾರದಲ್ಲಿ ಗುಣಮಟ್ಟದ ಟೊಮ್ಯಾಟೊ 15 ಕೆಜಿ ಬಾಕ್ಸ್ ಒಂದರ ಬೆಲೆ 1500 ರೂಪಾಯಿ ದಾಟಿದ್ದರೆ ಕೇವಲ ಒಂದೇ ಒಂದು ಲಾಟ್ ಪ್ರತಿ ಬಾಕ್ಸ್ಗೆ 2000 ರೂಪಾಯಿಗೆ ಹರಾಜಾಗಿ ದಾಖಲೆ ಬರೆದಿದೆ. ಇನ್ನು ಚಿಲ್ಲರೆ ಅಂಗಡಿಗಳಲ್ಲಿ ಟೊಮ್ಯಾಟೊ ಬೆಲೆ ಕೆಜಿಗೆ 140 ರೂಪಾಯಿ ದಾಟಿದೆ.
10,000-12,000 ಕ್ವಿಂಟಾಲ್ ಟೊಮ್ಯಾಟೊ ಆವಕವಾಗುತ್ತಿದ್ದ ಮಾರುಕಟ್ಟೆಯಲ್ಲಿ ಶುಕ್ರವಾರ ಶೇ.50ಕ್ಕಿಂತಲೂ ಕಡಿಮೆ ಪ್ರಮಾಣದಲ್ಲಿ ಅಂದರೆ 4664 ಕ್ವಿಂಟಾಲ್ನಷ್ಟು ಆವಕವಾಗಿತ್ತು. ಗುಣಮಟ್ಟದ ಟೊಮ್ಯಾಟೊ ಬಾಕ್ಸ್ 1,500 ರೂಪಾಯಿಗೆ ಮೇಲ್ಪಟ್ಟು ಹರಾಜಾದರೆ, ಕೆಆರ್ಎಸ್ ಮಂಡಿಯಲ್ಲಿ 20 ಬಾಕ್ಸ್ ಇದ್ದ ಒಂದು ಲಾಟ್ 2000 ರೂ.ಗೆ ಹರಾಜು ಕಂಡಿದೆ.
ಕೆಲವು ಮಂಡಿಗಳಲ್ಲಿ ಮಾಲೀಕರು ಸ್ಪರ್ಧೆಯ ಮೇಲೆ ಹರಾಜು ಕೂಗುವುದರಿಂದ ಒಂದು ಲಾಟ್ ದಾಖಲೆ ಬೆಲೆಗೆ ಹರಾಜಾಗಿದೆ. ಆವಕ ಕಡಿಮೆ ಇದ್ದುದರಿಂದ ಸರಾಸರಿ 1500 ರೂ.ಗೆ ಹರಾಜು ಕಾಣುತ್ತಿದೆ ಎಂದು ಎಪಿಎಂಸಿ ಕಾರ್ಯದರ್ಶಿ ಟಿ.ಎಸ್.ರವಿಕುಮಾರ್ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆ ಮಂಗಳವಾರ ಮುಗಿದು ಹೋಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮತದಾನದ ಮರು ದಿನ ನಿರಾಳ ನಗೆ ಬೀರುತ್ತ ಓಡಾಡಿದ್ದು ಕಂಡು…
ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಸಿದ ಘಟನೆ ಮೇ 6ರಂದು ನಡೆದಿದ್ದು,…
ಜಿಲ್ಲೆಯ ಮಲೇ ಮಹದೇಶ್ವರ ಬೆಟ್ಟದ ಹಾಡಿಯೊಂದರ ಸಮೀಪ ಆನೆಗಳ ಹಿಂಡೊಂದು ಜಾನುವಾರುಗಳಿಗೆ ಕಟ್ಟಿಸಿರುವ ನೀರಿನ ತೊಟ್ಟಿಯಲ್ಲಿ ದಾಹ ತೀರಿಸಿಕೊಂಡು ಕಾಡಿಗೆ…
ರೈಲ್ವೆ ನಿಲ್ದಾಣಗಳಿಗೆ ಭೇಟಿ ನೀಡುವ ಪ್ರಯಾಣಿಕರ ಯೋಗಕ್ಷೇಮವನ್ನು ಹೆಚ್ಚಿಸುವ ಅನ್ವೇಷಣೆಯಲ್ಲಿ, ಭಾರತೀಯ ರೈಲ್ವೆ ಇಲಾಖೆ 2023ರ ಆಗಸ್ಟ್ ತಿಂಗಳಲ್ಲಿ ಪ್ರಧಾನ…
ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜನ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಜಾನುವಾರುಗಳ ಮೇವಿಗೆ ಯಾವುದೇ ಕೊರತೆಯಾಗದಂತೆ ಜಿಲ್ಲಾಡಳಿತ ವತಿಯಿಂದ…
ವರುಣನ ಅಬ್ಬರಕ್ಕೆ ಕೆರೆಕಟ್ಟೆಗಳು ಭರ್ತಿಯಾಗಿದ್ದು, ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಸುತ್ತೂರು, ತಾಯೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಗಳಲ್ಲಿ…