ಕೋಲಾರ: ಎರಡು ವರ್ಷಗಳ ಬಳಿಕ ಹೊಸಬರಿಗೆ ಸಚಿವ ಸ್ಥಾನಬಿಟ್ಟುಕೊಡುವ ಬಗ್ಗೆ ಮೊದಲೇ ಮಾತುಕತೆ ಆಗಿದೆ. ಪಕ್ಷಕ್ಕೆ ದುಡಿದವರಿಗೆ ಅವಕಾಶ ಸಿಗಬೇಕಲ್ಲ ಎಂದು ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್. ಎನ್. ನಾರಾಯಣ ಸ್ವಾಮಿ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ವೇಳೆಯೂ ನಮಗೆ ಇದೇ ಭರವಸೆ ಸಿಕ್ಕಿದೆ. ಎರಡು ವರ್ಷದ ವರೆಗೆ ಕಾಯಿರಿ ಮುಂದಿನ ದಿನಗಳಲ್ಲಿ ಅವಕಾಶ ಮಾಡಿಕೊಡುವ ಎಂಬ ಭರವಸೆ ಸಿಕ್ಕಿದೆ ಎಂದರು.
ಎರಡು ವರ್ಷಗಳ ಬಳಿಕ ಹಿರಿಯರು ಸಚಿವ ಸ್ಥಾನ ಬಿಟ್ಟುಕೊಡಬೇಕು ಎಂಬ ಸಚಿವ ಕೆ. ಎಚ್. ಮುನಿಯಪ್ಪ ಅವರ ಮುನಿಯಪ್ಪ ಮಾತು ಸರಿ ಎಂದು ನಾರಾಯಣ ಸ್ವಾಮಿ ಹೇಳಿದರು.
ಕೋಲಾರದಿಂದ ಲೋಕಸಭೆಗೆ ಸ್ಪರ್ಧೆ ಮಾಡುವಂತೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಿದ್ದೇವೆ. ಈವರೆಗೆ ಅವರು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಚರ್ಚೆ ಹಂತದಲ್ಲಿದೆ ಎಂದರು.