ಕೋಲಾರ: ರಾಜ್ಯ ಸರ್ಕಾರದ ವಿರುದ್ಧ ಇಂದು ಕೋಲಾರದಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಫುಲ್ ಆಕ್ಟಿವ್ ಆಗಿವೆ. ಜೊತೆಗೆ ಶಿವಮೊಗ್ಗ, ಕೋಲಾರ ಸೇರಿದಂತೆ ಕೆಲ ಕಡೆ ಗಲಾಟೆಗಳು ನಡೆದಿವೆ.
ಜನತಾ ದರ್ಶನದಲ್ಲಿ ಸಂಸದ ಮುನಿಸ್ವಾಮಿಗೆ ಅಪಮಾನ ಪ್ರಕರಣ, ಕ್ಲಾಕ್ ಟವರ್ನಲ್ಲಿ ತಲ್ವಾರ್ ದ್ವಾರ ನಿರ್ಮಿಸಲು ಅನುಮತಿ ಹಾಗೂ ಜಿಲ್ಲೆಯಲ್ಲಿ ಅಶಾಂತಿ, ರೈತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ ನಡೆಯಲಿದೆ. ಸಂಸದರಾದ ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹ, ಮುನಿಸ್ವಾಮಿ, ಮಾಜಿ ಸಿಎಂ ಡಿವಿಎಸ್, ಡಾ.ಅಶ್ವತ್ಥ್ ನಾರಾಯಣ, K.S.ಈಶ್ವರಪ್ಪ, ಸಿ.ಟಿ.ರವಿ ಸೇರಿ ಹಲವರು ಬಿಜೆಪಿ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.