News Karnataka Kannada
Sunday, April 28 2024
ಕೋಲಾರ

ಕಾಂಗ್ರೆಸ್ ಸರ್ಕಾರ ಬದುಕಿದ್ದು ಸತ್ತಂತಾಗಿದೆ: ಯಡಿಯೂರಪ್ಪ

Congress government is alive and dead: Yediyurappa
Photo Credit : News Kannada

ಕೋಲಾರ: ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ಆದರೆ ಸರ್ಕಾರ ಕುಂಬಕರಣ ರೀತಿಯಲ್ಲಿದೆ, ಎಚ್ಚರಿಸಬೇಕಾಗಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಲಾರದಲ್ಲಿ ಮಾತನಾಡಿದ ಅವರು, ಹಬ್ಬದ ಬಳಿಕ ರಾಜ್ಯದ ಎಲ್ಲಾ ಮುಖಂಡರ ಜೊತೆ ಪ್ರತಿ ಜಿಲ್ಲೆಗೆ ಪ್ರವಾಸ ಮಾಡುತ್ತೇನೆ. ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸುತ್ತೇವೆ, ಮೋದಿ ಮತ್ತೆ ಪ್ರಧಾನಿ ಆಗಬೇಕು. ಜನರಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ತಿಳಿಸಿ ಪಕ್ಷ ಬಲಪಡಿಸುತ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬದುಕಿದ್ದು ಸತ್ತಂತಾಗಿದೆ. ಭೀಕರ ಬರ,ನೀರಿಗೆ ಹಾಹಾಕಾರ ಇದ್ರು ಸರ್ಕಾರ ಮಾತ್ರ ಕುಂಭಕರ್ಣ ರೀತಿಯಲ್ಲಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಒಂದು ಕಿಮೀ ಸಹ ರಸ್ತೆ ಆಗಿಲ್ಲ, ಅಭಿವೃದ್ಧಿ ಸ್ಥಗಿತವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಜನರು ಮರೆತಿದ್ದಾರೆ ಎಂದರು.

ಕುರುಡುಮಲೆ ಗಣೇಶನಿಗೆ ಪೂಜೆ ಸಲ್ಲಿಸಿ ಹೋರಾಟಕ್ಕೆ ಮುಂದಡಿಯಿಟ್ಟಿದ್ದೇವೆ. ಗಣೇಶ ಚತುರ್ಥಿ ಬಳಿಕ ಎಲ್ಲ ಮುಖಂಡರು ಎಲ್ಲ ಜಿಲ್ಲೆಗಳಿಗೆ ತೆರಳಿ ಹೋರಾಟ ನಡೆಸಲಿದ್ದಾರೆ ಎಂದರು. ಲೋಕಸಭೆ ಚುನಾವಣೆಗೂ ಸಿದ್ಧತೆ ನಡೆಸುತ್ತಿದ್ದೇವೆ. ಈ ಬಾರಿ 25 ಕ್ಕಿಂತಲೂ ಹೆಚ್ಚು ಸ್ಥಾನ ಗೆಲ್ಲಲ್ಲಿದ್ದೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು