ಕೋಲಾರ: ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಿಂಚಿತ್ತು ಕಾಳಜಿ ಇಲ್ಲವಾಗಿದೆ. ರಾಜ್ಯದಲ್ಲಿ ಬರಗಾಲ ಬಂದು 6 ತಿಂಗಳು ಕಳೆದರೂ ರೈತರಿಗೆ ಬಿಡಿಗಾಸು ಪರಿಹಾರ ನೀಡಿಲ್ಲ, ರೈತ ವಿರೋಧ ಧೋರಣೆ ಪಾಲನೆ ಮಾಡುತ್ತಿದೆ ಎಂದು ಮಾಜಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಜಿಲ್ಲಾ ಭಾರತೀಯ ಜನತಾ ಪಕ್ಷದಿಂದ ರಾಜ್ಯ ಕಾಂಗ್ರೇಸ್ ಸರ್ಕಾರದ ರೈತ ವಿರೋಧ ಜನವಿರೋಧಿ ನೀತಿ ಖಂಡಿಸಿ ಬಂಗಾರಪೇಟೆ ರಸ್ತೆಯ ಅಂಬೇಡ್ಕರ್ ವೃತ್ತದಿಂದ ಮೆಕ್ಕೆ ವೃತ್ತವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿ ಮಾತನಾಡಿದರು. ಅಲ್ಪಸಂಖ್ಯಾತರ ಅಭಿವೃದ್ದಿಗೆ 1000 ಕೋಟಿ ಬಿಡುಗಡೆ ಮಾಡುವ ಮೂಲಕ ಆಡಳಿತದಲ್ಲಿ ಜಾತಿಯತೇ ರಾಜಕಾರಣದ ಲಾಭ ಮಾಡಿಕೊಳ್ಳಲು ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಆದರೆ ಇತ್ತ ರೈತರನ್ನ ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಬೊಮ್ಮಾಯಿ ಹೇಳಿದರು.
ಟಿಪ್ಪುವನ್ನು ವೈಭವೀಕರಿಸುವ ಮೂಲಕ ಅಲ್ಪಸಂಖ್ಯಾತರನ್ನು ಒಲೈಸಿಕೊಳ್ಳುತ್ತಿದ್ದೀರಿ, ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಿಂಚಿತ್ತು ಕಾಳಜಿ ಇಲ್ಲವಾಗಿದೆ. ಸರ್ಕಾರದ 5 ಗ್ಯಾರಂಟಿಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದರು.