ಕೋಲಾರ: ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಲಜ್ಜೆಗೆಟ್ಟಸರ್ಕಾರ ಎಂದು ಆರೋಪಿಸುವ ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು. ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡು ಮೈತ್ರಿ ಸರ್ಕಾರವನ್ನು ಬೀಳಿಸಿದ್ದೇ ಸಿದ್ದರಾಮಯ್ಯ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಶುಕ್ರವಾರ ಕೋಲಾರ ಜಿಲ್ಲೆ ಮುಳಬಾಗಿಲಿನಲ್ಲಿ ‘ಪಂಚರತ್ನ ರಥಯಾತ್ರೆ’ಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಹಿಂದೆ ಮಳೆಯಿಂದಾಗಿ ಅನಿವಾರ್ಯವಾಗಿ ಯಾತ್ರೆಯನ್ನು ರದ್ದು ಮಾಡಬೇಕಾಯಿತು. ಈಗ ಇದೇ ನೆಲದಿಂದ ಯಾತ್ರೆಗೆ ಮತ್ತೆ ಚಾಲನೆ ನೀಡುತ್ತಿದ್ದೇವೆ. ಈ ಇಳಿವಯಸ್ಸಿನಲ್ಲಿಯೂ ದೇವೇಗೌಡರು ಜನಪರ ಕಾಳಜಿ ತೋರುತ್ತಿದ್ದಾರೆ ಎಂದರು.
ಅಧಿಕಾರಕ್ಕಾಗಿ ನಾವು ಯಾವ ಕಾಲದಲ್ಲಿಯೂ, ಯಾರ ಮನೆ ಬಾಗಿಲಿಗೂ ಅರ್ಜಿ ಹಿಡಿದುಕೊಂಡು ಹೋಗಿಲ್ಲ ಎಂದು ಹೇಳಿದ್ದಾರೆ.