ಕೋಲಾರ: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ವಿಚಾರವಾಗಿ ಪ್ರತಿಕ್ರಿಯೆಸಿದ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ, ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರತಿಭಟನೆಗಳು ನಡೆಯುತ್ತಿರುತ್ತವೆ. ಆ.26ರಂದು ಪ್ರತಿಭಟನೆಗೆ ಕರೆ ನೀಡಿರುವುದನ್ನು ಗಮನಿಸಿದರೆ ಸಿದ್ದರಾಮಯ್ಯ ಕಡೆಯವರೇ ಉದ್ದೇಶಪೂರ್ವಕವಾಗಿ ಕೋಳಿ ಮೊಟ್ಟೆ ಎಸೆದಿರಬಹುದು ಯಾರಿಗೆ ಗೊತ್ತು? ‘ ಎಂದು ತೋಟಗಾರಿಕೆ, ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ ಪ್ರತಿಭಟನೆ ನಡೆಸಲೆಂದೇ ವಿವಾದ ಸೃಷ್ಟಿಸಿದ್ದಾರೆ. ಸರ್ಕಾರದ ವಿರುದ್ಧ ಮಾತನಾಡಲು ಯಾವುದೇ ವಿಷಯ ಸಿಗುತ್ತಿಲ್ಲ. ಹೀಗಾಗಿ, ಯಾವುದೇ ವಿಷಯ ಸಿಕ್ಕಿದರೂ ಪ್ರತಿಭಟನೆ ನಡೆಸುತ್ತಾರೆ. ಈಗ ಮೊಟ್ಟೆ ಸಿಕ್ಕಿದೆ ‘ ಎಂದರು.
ಇದು ಪೊಲೀಸ್ ವೈಫಲ್ಯ ಎನ್ನಲಾಗದು. ಹತ್ತು ಜನರು ನಿಂತಿರುವಾಗ ಯಾರೋ ಒಬ್ಬ ಸಂದಿಯಿಂದ ಕಲ್ಲು, ಕೋಳಿ ಮೊಟ್ಟೆ ಎಸೆಯುವುದು ನಡೆಯುತ್ತಿರುತ್ತದೆ ಎಂದು ಹೇಳಿದರು.
ಸಿದ್ದರಾಮಯ್ಯ ಅವರತ್ತ ಕೋಳಿ ಮೊಟ್ಟೆ ಎಸದಿರುವುದು ತಪ್ಪು. ಕಾನೂನು ಪ್ರಕಾರ ಕ್ರಮ ವಹಿಸಲಾಗುತ್ತದೆ’ ಎಂದರು. ‘ ಕಾರ್ಯಕರ್ತರ ಮಟ್ಟದಲ್ಲಿ ಜಗಳ ನಡೆದಿರಬಹುದು. ಆದರೆ, ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಈ ರೀತಿ ಮಾಡಬಾರದು’ ಎಂದು ತಿಳಿಸಿದರು.