ಕೋಲಾರ

ಶಾಶ್ವತವಾಗಿ ಇತಿಹಾಸದ ಪುಟ ಸೇರಲಿದೆಯೇ ಕೆಜಿಎಫ್ ಚಿನ್ನದ ಗಣಿ

ಕೋಲಾರ: ಜಿಲ್ಲೆಯ ರಾಬರ್ಟ್‌ಸನ್‌ಪೇಟೆ ತಾಲೂಕಿನಲ್ಲಿರುವ ಈ ಚಿನ್ನದ ಗಣಿ ವಿಶ್ವದಲ್ಲೇ ಅತ್ಯಂತ ಪ್ರಸಿದ್ಧ ಚಿನ್ನದ ಗಣಿಯಾಗಿದೆ. ಜಿಲ್ಲಾ ಕೇಂದ್ರದಿಂದ ಇದು ಸುಮಾರು 30 ಕಿ.ಮೀ. ದೂರದಲ್ಲಿದ್ದು, ಇದನ್ನು 17-18 ನೇ ಶತಮಾನದ ನಡುವೆ ಪ್ರಾರಂಭಿಸಲಾಗಿತ್ತು. ಆ ನಂತರ 121 ವರ್ಷಗಳಲ್ಲಿ ಇಲ್ಲಿಂದ 900 ಟನ್ ಚಿನ್ನವನ್ನು ಹೊರತೆಗೆಯಲಾಗಿದೆ. ಈ ಕೆಜಿಎಫ್ ಚಿನ್ನದ ಗಣಿ ದೇಶದ ಅತ್ಯಂತ ಹಳೆಯ ಚಿನ್ನದ ಗಣಿಗಳಲ್ಲಿ ಒಂದಾಗಿದೆ. ಆದರೆ ಇದೀಗ ಶಾಶ್ವತವಾಗಿ ಇತಿಹಾಸದ ಪುಟ ಸೇರಲಿದೆ ಅಂತೆ ಕೆಜಿಎಫ್ ಚಿನ್ನದ ಗಣಿ.

ಹೌದು. . ಚಿನ್ನದ ಗಣಿಯ ಕೇಂದ್ರದ ಗುತ್ತಿಗೆ ಅವಧಿ ಮುಕ್ತಾಯವಾಗಿದ್ದು, ಪುನರಾರಂಭಕ್ಕೆ ಕೇಂದ್ರ ನಿರಾಸಕ್ತಿ ತಾಳಿದೆ. ರಾಜ್ಯ ಸರ್ಕಾರಕ್ಕೆ ಭೂಮಿಯನ್ನು ಹಿಂತಿರುಗಿಸುವ ಪ್ರಕ್ರಿಯೆಯನ್ನೂ ಕೇಂದ್ರ ಗಣಿ ಇಲಾಖೆ ಆರಂಭಿಸಿದೆ. 2001 ರ ಫೆಬ್ರವರಿಯಲ್ಲಿ ಕೆಜಿಎಫ್ ಚಿನ್ನದ ಗಣಿಗೆ ಅಧಿಕೃತವಾಗಿ ಬೀಗ ಹಾಕಲಾಗಿತ್ತು. ನಂತರ ಚಿನ್ನದ ಗಣಿ ಪುನರಾರಂಭ ಮಾಡುವ ಬಗ್ಗೆ ಸತತ 22 ವರ್ಷಗಳಿಂದ ಪ್ರಯತ್ನ ನಡೆಯುತ್ತಿದೆ. ಆದರೆ, ಈಗ ಅದೂ ಕೊನೆಗೊಂಡಿದೆ.

ಕೆಜಿಎಫ್​ ಚಿನ್ನದ ಗಣಿಯ ಕೇಂದ್ರ ಸರ್ಕಾರಕ್ಕೆ ನೀಡಿದ್ದ ಗುತ್ತಿಗೆ ಅವಧಿ 2023ರ ಆಗಸ್ಟ್​​ಗೆ ಮುಕ್ತಾಯವಾಗಲಿದೆ. ಹೀಗಾಗಿ 12,500 ಎಕರೆ ಪ್ರದೇಶವನ್ನು ರಾಜ್ಯ ಸರ್ಕಾರಕ್ಕೆ ಹಿಂದುರುಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಮಧ್ಯೆ, ಚಿನ್ನದ ಅದಿರು ತೆಗೆದು ಹಾಕಲಾಗಿರುವ ಸೈನೆಡ್ ಮಿಶ್ರಿತ ಮಣ್ಣಿನ ಗುಡ್ಡಗಳನ್ನು ಶೋಧಿಸಿ ಚಿನ್ನ ತೆಗೆಯಲು ಕೇಂದ್ರ ಸರ್ಕಾರ ಗ್ಲೋಬಲ್ ಟೆಂಡರ್ ಕರೆದಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಏನು ಕ್ರಮ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ.

Ashitha S

Recent Posts

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

14 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

31 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

59 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago